ಧಾರವಾಡ ಕೈ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಸಂಕಷ್ಟ

Public TV
1 Min Read

ಧಾರವಾಡ: ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗಲೇ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಪೊಲೀಸ್ ಅಧಿಕಾರಿಗಳಾದ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ವಿರುದ್ಧ ಕೂಡ ಎಫ್‍ಐಆರ್ ದಾಖಲಿಸಿಕೊಳ್ಳುವಂತೆ ಧಾರವಾಡ ಜೆಎಂಎಫ್‍ಸಿ ಕೋರ್ಟ್ ಆದೇಶಿಸಿದೆ.

ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದದಲ್ಲಿ ಸಾಕ್ಷಿಗಳ ಮೇಲೆ ಒತ್ತಡ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಯೋಗೀಶಗೌಡ ಅವರ ಕೊಲೆ ಪ್ರಕರಣದಲ್ಲಿ ಆರು ಜನ ಆರೋಪಿಗಳು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆ ಆರು ಜನ ವಿನಯ್ ಅವರ ಅನುಯಾಯಿಗಳೇ ಆಗಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಸಚಿವ ವಿನಯ್ ಅವರ ಕೈವಾಡ ಇದೆ ಎಂದು ಯೋಗೀಶಗೌಡರ ಪತ್ನಿ ಮಲ್ಲಮ್ಮ ಸಂಶಯ ವ್ಯಕ್ತಪಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *