ವೃದ್ಧನ ಮೇಲೆ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಗೂಂಡಾಗಿರಿ

Public TV
0 Min Read

ಧಾರವಾಡ: ಕೆಎಸ್ಆರ್‌ಟಿಸಿ ನಿರ್ವಾಹಕನೊಬ್ಬ ವೃದ್ಧನ ಮೇಲೆ ಗೂಂಡಾವರ್ತನೆ ತೋರಿದ ಘಟನೆ ಧಾರವಾಡದ ಅಳ್ನಾವರದಲ್ಲಿ ನಡೆದಿದೆ.

ಹಳಿಯಾಳ-ಚುಂಚವಾಡ ಮಾರ್ಗದ ಬಸ್‍ನಲ್ಲಿ ಹಿರಿಯ ನಾಗರಿಕರ ರಿಯಾಯಿತಿ ಬಸ್ ಪಾಸ್ ಸಂಬಂಧ ವೃದ್ಧ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಸ್ ಅಳ್ನಾವರ ಬಸ್ ನಿಲ್ದಾಣಕ್ಕೆ ಬರ್ತಿದ್ದಂತೆಯೇ ಸಿಟ್ಟಿಗೆದ್ದ ಕಂಡಕ್ಟರ್ ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ವೃದ್ಧ ಓಡಿ ಹೋದರೂ ಬಿಡದೇ ಅಟ್ಟಿಸಿಕೊಂಡು ಬಂದು ಕಂಡಕ್ಟರ್ ಗೂಂಡಾಗಿರಿ ಮೆರೆದಿದ್ದಾನೆ. ಪೊಲೀಸ್ ಠಾಣೆ ಎದುರಿನಲ್ಲೇ ಇರುವ ಬಸ್ ನಿಲ್ದಾಣದಲ್ಲಿ ಕಂಡಕ್ಟರ್ ಪೌರುಷ ಸಖತ್ ವೈರಲ್ ಆಗಿದೆ.

Share This Article
1 Comment

Leave a Reply

Your email address will not be published. Required fields are marked *