ರಾಜ್ಯದಲ್ಲಿ ಪಕ್ಷವನ್ನ ಮತ್ತಷ್ಟು ಬಲಗೊಳಿಸುವುದೇ ನನ್ನ ಗುರಿ: ದಿನೇಶ್ ಗುಂಡೂರಾವ್

Public TV
1 Min Read

ಬೆಂಗಳೂರು: ನಾನು ಸಚಿವನಾಗಿ ಕೆಲಸ ಮಾಡಿದ್ದಕ್ಕಿಂತ ಹೆಚ್ಚು ಪಕ್ಷದ ಸಂಘಟನೆಯಲ್ಲಿಯೇ ತೊಡಗಿಸಿಕೊಂಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಬಲಗೊಳಿಸುವುದೇ ನನ್ನ ಗುರಿ ಆ ನಿಟ್ಟಿನಲ್ಲಿ ಕಾರ್ಯ ಯೋಜನೆಗಳ ಬಗ್ಗೆ ರಾಜ್ಯದ ಹಿರಿಯ ಮತ್ತು ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಅಂತಾ ಕೆಪಿಸಿಸಿಯ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳು, ಸಮನ್ವಯದಿಂದ ಆಡಳಿತ ನಡೆಸುವುದರ ಜೊತೆಗೆ ಜನರ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಮುಖ್ಯ, ಆ ಜವಾಬ್ದಾರಿಯನ್ನ ನಾನು ಸಮರ್ಥವಾಗಿ ನಿರ್ವಹಿಸುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನನಗೆ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿಯನ್ನ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

2019 ರ ಲೊಕಸಭೆ ಚುನಾವಣೆಯ ಕಾಲಘಟ್ಟದಲ್ಲಿ ಪಕ್ಷ ಪ್ರಮುಖ ಜವಾಬ್ದಾರಿ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಂಪಿಗಳನ್ನ ಆರಿಸಿ ಕಳಿಸಬೇಕಿದೆ. ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ವಾಪಸ್ಸಾದ ಬಳಿಕ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಮನೆಗೆ ಬೇಟಿ ಕೊಟ್ಟು ಕೃತಜ್ಞತೆ ಸಲ್ಲಿಸಿದರು. ತಡರಾತ್ರಿ ದಿನೇಶ್ ಗುಂಡೂರಾವ್ ಮನೆಗೆ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಮತ್ತು ಕಾಂಗ್ರಸ್ ಕಾರ್ಯಕರ್ತರು ಆಗಮಿಸಿ ಶುಭಾಶಯ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *