ಪ್ರಶಾಂತ್ ನೀಲ್ ಕನ್ನಡಕ್ಕೆ ಸಿಗುವುದು ಅನುಮಾನ?: ತೆಲುಗಿನ ಮತ್ತೊಬ್ಬ ಸ್ಟಾರ್ ನಟನಿಗೆ 6ನೇ ಸಿನಿಮಾ

Public TV
2 Min Read

ಕೆಜಿಎಫ್ ಸಿನಿಮಾದ ನಂತರ ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ಬಹುಬೇಡಿಕೆಯ ನಿರ್ದೇಶಕರಾಗುತ್ತಿದ್ದಾರೆ. ಇದರ ಜೊತೆಗೆ ಅವರು ಕನ್ನಡ ಸಿನಿಮಾಗಳಿಗೆ ಸಿಗುವುದು ಅನುಮಾನ ಎನ್ನುವಂತಹ ಸುದ್ದಿಗಳು ತೆಲುಗು ಸಿನಿಮಾ ರಂಗದಿಂದ ಕೇಳಿ ಬರುತ್ತಿವೆ. ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಇನ್ನೂ ಆರೇಳು ವರ್ಷಗಳ ಕಾಲ ಕನ್ನಡ ಸಿನಿಮಾವನ್ನೇ ಮಾಡುವುದಿಲ್ಲ ಎನ್ನುವುದು ಆಘಾತಕಾರಿ ಬೆಳವಣಿಗೆ. ಇದನ್ನೂ ಓದಿ : ‘ಕಾಳಿ’ ಟೈಟಲ್ ಧ್ರುವ ಸರ್ಜಾಗಾ? ಅಥವಾ ಅಭಿಷೇಕ್ ಅಂಬರೀಶ್ ಗಾ?

ಸದ್ಯ ತೆಲುಗಿನ ಸಲಾರ್ ಸಿನಿಮಾಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಪ್ರಭಾಸ್ ನಾಯಕನಾದರೆ, ಕನ್ನಡದ್ದೇ ಆದ ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಅಷ್ಟರ ಮಟ್ಟಿಗೆ ಪ್ರಶಾಂತ್ ನೀಲ್ ಕನ್ನಡದವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆಯೇ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಪ್ರಶಾಂತ್ ನೀಲ್ ಚಿತ್ರ ಮಾಡಲಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಸಂಸ್ಥೆಯೇ ನಿರ್ಮಾಣ ಮಾಡುತ್ತಿದೆ. ಈ ಎರಡೂ ಚಿತ್ರಗಳ ನಂತರ ಅವರು ಕನ್ನಡ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾಹಿತಿ ಇತ್ತು. ಅದಕ್ಕೂ ಇದೀಗ ಕಲ್ಲು ಬಿದ್ದಿದೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ

ಇದೀಗ ತೆಲುಗಿನಲ್ಲಿ ಭಾರೀ ಸುದ್ದಿ ಆಗಿದ್ದು ಪ್ರಶಾಂತ್ ನೀಲ್, ತೆಲುಗಿನ ಮತ್ತೊಬ್ಬ ಸ್ಟಾರ್ ನಟನಿಗೆ ಸಿನಿಮಾ ಮಾಡಲಿದ್ದಾರೆ ಎನ್ನುವುದು. ಜ್ಯೂನಿಯರ್ ಎನ್.ಟಿ.ಆರ್ ಚಿತ್ರ ಮುಗಿಯುತ್ತಿದ್ದಂತೆಯೇ ನಾನಿಗಾಗಿ ಅವರು ಸಿನಿಮಾ ಮಾಡಲಿದ್ದಾರಂತೆ. ಇದು ನಿಜವೋ, ಸುಳ್ಳೋ ಗೊತ್ತಿಲ್ಲ. ಆದರೆ, ತೆಲುಗು ಸಿನಿಮಾ ರಂಗದಲ್ಲಿ ಮಾತ್ರ ಈ ಸುದ್ದಿ ಭಾರೀ ಗಿರಿಕಿಯಂತೂ ಹೊಡೆಯುತ್ತಿದೆ. ಇದನ್ನೂ ಓದಿ: ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು

ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾದ ನಂತರ ಪ್ರಶಾಂತ್ ನೀಲ್ ಅವರು ಮತ್ತೆರಡು ಕನ್ನಡ ಸಿನಿಮಾಗಳನ್ನು ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಒಂದು ಸಿನಿಮಾವನ್ನು ಶ್ರೀಮುರುಳಿಗೆ ಮಾಡಿದರೆ, ಮತ್ತೊಂದು ಸಿನಿಮಾವನ್ನು ಯಶ್ ಗಾಗಿಯೇ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿ ಇತ್ತು. ಆದರೆ, ಈ ನಡುವೆ ನಾನಿ ಅವರ ಸಿನಿಮಾ ಸೇರ್ಪಡೆಗೊಂಡಿದೆ. ಸುದ್ದಿಗಳು ಏನೇ ಹರಿದಾಡಿದರೂ, ನಿಜ ಏನು ಅನ್ನುವ ಕುರಿತು ಪ್ರಶಾಂತ್ ನೀಲ್ ಅವರೇ ಉತ್ತರಿಸಬೇಕು.

Share This Article
Leave a Comment

Leave a Reply

Your email address will not be published. Required fields are marked *