ಡಿಸಾರ್ಜ್ ಆದ ಶಿವಣ್ಣ: ನಾಗವಾರದ ನಿವಾಸಕ್ಕೆ ಆಗಮನ

Public TV
1 Min Read

ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್, ಚಿಕಿತ್ಸೆ ಪಡೆದುಕೊಂಡು ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ದಿನ ಆಸ್ಪತ್ರೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆದಿದ್ದರು.

ಶಿವಣ್ಣ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ. ಡಿಸ್ಚಾರ್ಜ್ (Discharged) ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ (Shivaraj Kumar) ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ (hospital) ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಿದ್ದಾರೆ.

 

ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಶಿವರಾಜ್ ಕುಮಾರ್ ಅವರಿಗೆ ಸುಸ್ತಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಪರೀಕ್ಷೆಗಳನ್ನ ಮಾಡಿಸಿ ರಿಪೋರ್ಟ್ ಪಡೆದು, ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಶಿವಣ್ಣ. ಆದರೆ, ಶೂಟಿಂಗ್ ಸೆಟ್ ನಲ್ಲಿ ಬಹಳಷ್ಟು ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article