ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

Public TV
1 Min Read

ಹೈದರಾಬಾದ್: ನಟ ಹಾಗೂ ರಾಜಕಾರಣಿ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಜೊತೆ ನಾಲ್ಕು ಜನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಕುರಿತು ಭಾರೀ ಟೀಕೆ ಕೇಳಿ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ ನಾಲ್ವರನ್ನು ಕೆಲಸದಿಂದ ವಜಾಗೊಳಿಸಿದೆ.

ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆಗಿನ ಸೆಲ್ಫಿ ಫೋಟೋ ನೋಡಿದ್ದ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಯ ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಒತ್ತಾಯಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿ, ಸಾರ್ವಜನಿಕರಲ್ಲಿ ಕ್ಷಮೆ ಕೇಳಿದೆ.

ನಡೆದದ್ದು ಏನು?
ಆಗಸ್ಟ್ 29ರಂದು ತೆಲಂಗಾಣದ ನಲ್ಗೊಂಡ ಬಳಿ ಬೀಕರ ಅಪಘಾತ ಸಂಭವಿಸಿ, ನಂದಮೂರಿ ಹರಿಕೃಷ್ಣ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಮೃತ ದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *