ನಗರಸಭೆ ಸದಸ್ಯನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ವಶ

Public TV
1 Min Read

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ಅಕ್ರಮವಾಗಿ ಪಡಿತರವನ್ನು ಸಂಗ್ರಹಿಸಿಟ್ಟಿದ್ದ ನಗರಸಭಾ ಸದಸ್ಯ ಸೇರಿ ನಾಲ್ವರನ್ನು ಅಪರಾಧ ಪತ್ತೆ ದಳದ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.

ಜನರಿಗೆ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಬೇಕಿದ್ದ ಪಡಿತರ ಅಕ್ಕಿ ಮತ್ತು ತೊಗರಿಬೇಳೆ ಮೂಟೆಗಳನ್ನು ನಗರಸಭೆ ಸದಸ್ಯ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಜಿಲ್ಲಾ ಅಪರಾಧ ಪತ್ತೆ ದಳದ ಅಧಿಕಾರಿಗಳು, ಅಕ್ರಮವಾಗಿ ಬನ್ನೂರಿನ ಮುಸ್ಲಿಂ ಬ್ಲಾಕ್ ನ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 150 ಮೂಟೆ ಅಕ್ಕಿ ಹಾಗೂ ಅಪಾರ ಪ್ರಮಾಣದ ತೊಗರಿಬೇಳೆ ಮೂಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಡಿತರ ದಾಸ್ತಾನನ್ನು ಅಕ್ರಮವಾಗಿ ಹೊಂದಿದ್ದ ಆರೋಪದ ಮೇಲೆ ಅಪರಾಧ ಪತ್ತೆ ದಳದ ಅಧಿಕಾರಿಗಳು ಬನ್ನೂರು ನಗರಸಭಾ ಸದಸ್ಯ ಸಯ್ಯದ್ ಸೇರಿದಂತೆ ಇತರೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
1 Comment

Leave a Reply

Your email address will not be published. Required fields are marked *