ಇಡಿ ಕೇಸ್‍ನಲ್ಲಿ ಡಿಕೆಶಿ ಆಪ್ತನ ಸಂಬಂಧಿಗಳಿಗೆ ಬಿಗ್ ರಿಲೀಫ್

Public TV
1 Min Read

ನವದೆಹಲಿ: ಡಿ.ಕೆ ಶಿವಕುಮಾರ್ ಆಪ್ತ ಸಹಾಯಕ ಆಂಜನೇಯ ಸಂಬಂಧಿಗಳಿಗೆ ಇಂದು ದೆಹಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ದೆಹಲಿಗೆ ಬಂದು ವಿಚಾರಣೆ ಹಾಜರಾಗವಂತೆ ಇಡಿ ನೀಡಿದ್ದ ಸಮನ್ಸ್‍ನಿಂದ ನಿಂದ ರಿಯಾಯಿತಿ ಸಿಕ್ಕಿದ್ದು ದೆಹಲಿಗೆ ಬಂದು ವಿಚಾರಣೆ ಎದುರಿಸುವ ಅವಶ್ಯಕತೆ ಇಲ್ಲ ಎಂದು ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಅಭಿಪ್ರಾಯಪಟ್ಟಿದೆ.

ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೀಡಿದ್ದ ಸಮನ್ಸ್ ಪಶ್ನಿಸಿ ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಡಿಕೆಶಿ ಆಪ್ತ ಆಂಜನೇಯ ಸಂಬಂಧಿಗಳಾದ ಜಿ.ಹನುಮಂತಯ್ಯ, ಮೀನಾಕ್ಷಿ, ಲಕ್ಷ್ಮಮ್ಮ, ಜಯಶೀಲ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಖುದ್ದು ವಿಚಾರಣೆಗೆ ಹಾಜರಾಗುವ ಅವಶ್ಯಕತೆ ಇಲ್ಲ ಆದರೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುವ ದಾಖಲೆಗಳನ್ನು ನೀಡುವಂತೆ ಸೂಚಿಸಿದೆ.

ಇದೇ ಪ್ರಕರಣದ ಅಡಿ ಬೆಂಗಳೂರಿನಲ್ಲಿ ವಿಚಾರಣೆಗೆ ಕೋರಿ ಡಿ.ಕೆ ಶಿವಕುಮಾರ್ ಪತ್ನಿ ಉಷಾ ಕೂಡಾ ಅರ್ಜಿ ಸಲ್ಲಿಸಿದ್ದರು ಈ ಅರ್ಜಿಯನ್ನ ಜನವರಿ 15 ಕ್ಕೆ ಮುಂದೂಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *