ಅವರಾಗಿ ಕರೆದ್ರೆ ಮಾತ್ರ ಹೋಗ್ತೀವಿ: ಹೈಕಮಾಂಡ್‌ ಭೇಟಿಯಾಗದೇ ಇರಲು ಡಿಕೆ ಬ್ರದರ್ಸ್‌ ನಿರ್ಧಾರ

1 Min Read

ಬೆಂಗಳೂರು: ಅಧಿಕಾರ ಹಂಚಿಕೆ ಕಿತ್ತಾಟ ಜಾಸ್ತಿಯಾಗಿದ್ದು, Word Is Stronger Than World ಈ ನಿಲುವಿಗೆ ಬದ್ದರಾಗಿರಲು ಡಿಕೆ ಸಹೋದರರು (DK Brothers) ನಿರ್ಧಾರ ತೆಗೆದುಕೊಂಡಿದ್ದಾರೆ.

ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ (Congress High Command) ಹೇಳಿದ ಎಲ್ಲಾ ಕೆಲಸ ಮಾಡಿ ಮುಗಿಸಿದ್ದೇನೆ. ಈಗಲೂ ಹೈಕಮಾಂಡ್ ಹೇಳಿದ ಮಾತಿಗೆ ನಾವು ಬದ್ಧವಾಗಿದ್ದೇನೆ. ಹೀಗಾಗಿ ಅವರಾಗಿಯೇ ಕರೆಯುವವರೆಗೆ ಯಾವುದೇ ಕಾರಣಕ್ಕೆ ಹೈಕಮಾಂಡ್‌ ನಾಯಕರನ್ನು ಭೇಟಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ, ಶಾಸಕರು ದೆಹಲಿಗೆ ಹೋದರೆ ತಪ್ಪೇನು? : ಡಿಕೆಶಿ

 

ಹೈಕಮಾಂಡ್ ಹೇಳಿದ ಎರಡೂವರೆ ವರ್ಷದ ಗಡುವು ಮುಗಿದಿದೆ. ಈಗ ನೀವು ಹೇಳಬೇಕು. ನಾನು ಕೇಳಬೇಕು. ಈ ನಿಲುವಿಗೆ ದೃಢವಾಗಿ ನಿಲ್ಲಲು ಡಿಕೆಶಿ (DK Shivakumar) ಮುಂದಾಗಿದ್ದಾರೆ. ಇದನ್ನೂ ಓದಿ: ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಇನ್ನೂ 2 ಬಜೆಟ್ ಮಂಡಿಸ್ತೀನಿ: ಸಿದ್ದರಾಮಯ್ಯ ಖಡಕ್‌ ನುಡಿ

100 ಕಾಂಗ್ರೆಸ್‌ ಕಟ್ಟಡ ಶಂಕುಸ್ಥಾಪನೆ ಮಾಡಲು ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಲು ಡಿಕೆಶಿ ದೆಹಲಿಗೆ ತೆರಳಿದ್ದರು. ಆದರೆ ರಾಹುಲ್‌ ಗಾಂಧಿ ಡಿಕೆಶಿ ಭೇಟಿಗೆ ಅವಕಾಶ ನೀಡಿರಲಿಲ್ಲ. ಈಗ ಒಂದು ವಾರದ ಒಳಗಡೆ ಹೈಕಮಾಂಡ್‌ ನಾಯಕರೇ ಡಿಕೆಶಿ ಭೇಟಿಗೆ ಬುಲಾವ್‌ ನೀಡುವ ಸಾಧ್ಯತೆಯಿದೆ.

Share This Article