ಪುತ್ರನನ್ನ ಗೆಲ್ಲಿಸಿಕೊಡುವಂತೆ ಕಾಂಗ್ರೆಸ್ ಮುಖಂಡನ ಮೊರೆ ಹೋದ್ರಾ ಸಿಎಂ?

Public TV
1 Min Read

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿಗೆ ಏರ್ಪಟಿದ್ದು, ಸುಮಲತಾ ಅಂಬರೀಶ್ ವರ್ಸಸ್ ನಿಖಿಲ್ ಕುಮಾರಸ್ವಾಮಿ ಎಂಬತಾಗಿದೆ. ಇದೀಗ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನನ್ನು ಗೆಲ್ಲಿಸಿಕೊಡುವಂತೆ ಕಾಂಗ್ರೆಸ್ ಮುಖಂಡ, ಟ್ರಬಲ್ ಶೂಟರ್, ಸಚಿವ ಡಿ.ಕೆ.ಶಿವಕುಮಾರ್ ಬಳಿ ತೆರಳಿದ್ದಾರೆ ಎನ್ನಲಾಗುತ್ತಿದೆ.

ಜೆಡಿಎಸ್ ಈಗಾಗಲೇ ಮಂಡ್ಯದಿಂದ ನಿಖಿಲ್ ಕುಮಾರ್ ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಘೋಷಣೆ ಮಾಡಿದೆ. ಇತ್ತ ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ . ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ, ಪಕ್ಷೇತರಳಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂಬ ಸಂದೇಶವನ್ನು ಕೈ ನಾಯಕರಿಗೆ ಸಂದೇಶವನ್ನು ಸುಮಲತಾ ರವಾನಿಸಿದ್ದಾರೆ. ಹೀಗಾಗಿ ಸುಮಲತಾರು ಅನುಕಂಪದ ಆಧಾರದ ಮೇಲೆ ಗೆಲುವು ಸಾಧಿಸಿದ್ರೆ, ಪುತ್ರನ ಸೋಲಾಗುತ್ತದೆ. ಹೀಗಾಗಿ ಪುತ್ರನನ್ನ ಗೆಲ್ಲಿಸಿಕೊಡಿ ಎಂದು ಸಿಎಂ ಕೇಳಿದ್ದಾರಂತೆ.

ಈ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದು, ಸಂಜೆ 5.30ಕ್ಕೆ ಎಲ್ಲ ಸ್ಥಳೀಯ ನಾಯಕರಿಗೆ ತಮ್ಮ ನಿವಾಸಕ್ಕೆ ಆಗಮಿಸುವಂತೆ ಕರೆ ನೀಡಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಡಿ.ಕೆ.ಶಿವಕುಮಾರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *