ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

Public TV
1 Min Read

– ಬೆಂಗಳೂರು ಟ್ರಾಫಿಕ್‌ಗೆ ಇದು ಪರಿಹಾರವಲ್ಲ ಎಂದ ತೇಜಸ್ವಿ ಸೂರ್ಯ
– ಇಡೀ ರಾಜ್ಯಕ್ಕೆ ಮಾಡ್ಲಿ ಎಂದು ಹೆಚ್‌ಡಿಕೆ ವ್ಯಂಗ್ಯ

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಕನಸು ಕಂಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಟನಲ್ ರೋಡ್‌ನಿಂದ (Tunnel Road) ಏನೇನು ಉಪಯೋಗ ಆಗುತ್ತದೆ ಎಂದು ಎಕ್ಸ್ ಮೂಲಕ ಹಂಚಿಕೊಂಡಿದ್ದಾರೆ.

ನಿಮ್ಮ ಸಮಯ, ನಿಮ್ಮನ್ನು ಗಮನದಲ್ಲಿಟ್ಟುಕೊಂಡು ಸುರಂಗ ನಿರ್ಮಾಣ ಮಾಡುತ್ತಿದ್ದೇವೆ. ಹೆಬ್ಬಾಳ ಟು ಸಿಲ್ಕ್ ಬೋರ್ಡ್ 25ಕ್ಕೂ ಹೆಚ್ಚು ಅಡಚಣೆ ತಪ್ಪಿಸಬಹುದು. ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು. 16.75 ಕಿ.ಮೀ ತಡೆರಹಿತ, ಸಿಗ್ನಲ್-ಮುಕ್ತವಾಗಿ ಪ್ರಯಾಣಿಸಬಹುದು. ಐಟಿ ಕಾರಿಡಾರ್‌ಗೆ ನೇರ ಪ್ರವೇಶ ಸಿಗಲಿದೆ. ವೇಗವಾದ ಸ್ಮಾರ್ಟ್ ಬೆಂಗಳೂರು ತನ್ನ ಹಾದಿಯಲ್ಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

ಇನ್ನು ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಸುರಂಗ ರಸ್ತೆ ಒಂದು ಅವೈಜ್ಞಾನಿಕ ಪರಿಹಾರ. ತೆರಿಗೆದಾರರ 18,000 ಕೋಟಿ ಹಣ ಖರ್ಚು ಮಾಡಿ ಯೋಜನೆ ವಿಫಲಗೊಳ್ಳುವುದು ಖಚಿತ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕೂಡ ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ. ಟನಲ್ ರೋಡನ್ನು ಬೆಂಗಳೂರು ಮಾತ್ರ ಅಲ್ಲ, ಇಡೀ ರಾಜ್ಯಕ್ಕೆ ಮಾಡಲಿ. ಯಾವ ಟನಲ್ ಮಾಡುತ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.  ಇದನ್ನೂ ಓದಿ: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ – ಶಾಸಕ ಬಿಆರ್ ಪಾಟೀಲ್ ಮತ್ತೊಂದು ಬಾಂಬ್

Share This Article