ಬೆಂಗಳೂರು: ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಅವರು ವಯಸ್ಸಲ್ಲಿ ದೊಡ್ಡವರಿರಬಹುದು, ಆದರೆ ರಾಜಕೀಯದಲ್ಲಿ ಇನ್ನೂ ಎಳಸು ಎಂದು ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಮೇಕೆದಾಟು ಪಾದಯಾತ್ರೆಗೆ ಇಂದಿನಿಂದ ಸಿದ್ಧತೆ ನಡೆಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ಸ್ಯಾಂಕಿ ಕೆರೆ ದಂಡೆಯಲ್ಲಿ ಇಂದಿನಿಂದ 8 ದಿನಗಳವರೆಗೂ ವಾಕಿಂಗ್ ಪ್ರಾಕ್ಟಿಸ್ ಮಾಡುತ್ತಿದ್ದಾರೆ. ಇಂದು 6 ಕಿಮೀವರೆಗೂ ನಡೆದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಹೋಂ ಮಿನಿಸ್ಟರ್ಗೆ ಅನುಭವ ಇಲ್ಲ. ರೋಡ್ನಲ್ಲಿ ನಾನು ನಡೆಯುವುದಕ್ಕೆ ಇವರ ಅನುಮತಿ ಬೇಕಾ? ಹೋಂ ಮಿನಿಸ್ಟರ್ ಅವರು ವಯಸ್ಸಲ್ಲಿ ದೊಡ್ಡವರಿರಬಹುದು, ಆದರೆ ರಾಜಕೀಯದಲ್ಲಿ ಇನ್ನೂ ಎಳಸು. ಹೋರಾಟ ಮಾಡುವುದಕ್ಕೆ ಇವರ ಅನುಮತಿ ಕೇಳಬೇಕಾ? ಅಶೋಕಣ್ಣನಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದೂಗಳ ಧಾರ್ಮಿಕ ಕೇಂದ್ರ ರಕ್ಷಣೆಗೂ ಬೋರ್ಡ್ ಬೇಕು: ಶಾಸಕ ರಾಮದಾಸ್
ಮೇಕೆದಾಟು ಹೋರಾಟದ ಮೂಲಕ ಡಿ.ಕೆ.ಶಿವಕುಮಾರ್ ಅವರು ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಯಾವ ವೈಯಕ್ತಿಕ ಏನೂ ಇಲ್ಲ. ನನ್ನಲ್ಲಿ ಹೋರಾಟದ ಸಣ್ಣ ಗುಣ ಇದ್ದಿದ್ದಕ್ಕೆ ತಾನೇ ದೇವೇಗೌಡರ ಎದುರು ಅವತ್ತು ಚುನಾವಣೆಗೆ ನಿಲ್ಲಿಸಿದ್ದು. ಚುನಾವಣೆಯಲ್ಲಿ ಸೋತಿರಬಹುದು ಆದರೆ ಅಂಥ ಹೋರಾಟಗಾರರ ವಿರುದ್ಧ ನನ್ನ ನಿಲ್ಲಿಸಬೇಕು ಅಂದರೆ ನನ್ನ ಹೋರಾಟದ ಗುಣ ಕೂಡ ಕಾರಣ ಅಲ್ವಾ ಎಂದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು
ಹೊಸ ವರ್ಷ ರಾಜ್ಯದ ಜನತೆಗೆ ಆರೋಗ್ಯ, ಶಕ್ತಿ ನೀಡಲಿ. ಮಾನಸಿಕವಾಗಿ ಜನ ಕುಗ್ಗಿ ಹೋಗಿದ್ದಾರೆ. ಸಾಮಾಜಿಕವಾಗಿ ಮತ್ತು ಮಕ್ಕಳ ವಿದ್ಯಾಭ್ಯಾಸದ ಮೇಲೆ ಬಹಳ ಪರಿಣಾಮ ಬೀರಿದೆ. ಹೊಸ ಕಾಯಿಲೆ ಕೂಡ ದೂರ ಹೋಗಬೇಕು. ಏರ್ಪೋರ್ಟ್ನಲ್ಲಿ ದಂಧೆ ನಡೆಯುತ್ತಿದೆ. ನೆಗಡಿ ಬಂದವರಿಗೆ ಪಾಸಿಟಿವ್ ಕೊಡುತ್ತಿದ್ದಾರೆ. ಸಿಎಂ ಈ ಬಗ್ಗೆ ಗಮನ ಹರಿಸಬೇಕು. ಹೊರಗಡೆಯಿಂದ ಬಂದವರಿಗೆ ನೆಗೆಟಿವ್ ಇದ್ದರೂ, ಇಲ್ಲಿ ಪಾಸಿಟಿವ್ ವರದಿ ಕೊಟ್ಟು ಪ್ರತಿಯೊಬ್ಬರಿಂದ ಮೂರು ಸಾವಿರ ವಸೂಲಿ ಮಾಡುತ್ತಿದ್ದಾರೆ. ಅದನ್ನು ಸಿಎಂ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.