MES ಗಲಾಟೆ ಮಾಡಿದೆ ಅಂತ ನಾನು ಹೇಳಲ್ಲ: ಡಿ.ಕೆ ಶಿವಕುಮಾರ್

Public TV
1 Min Read

ಬೆಳಗಾವಿ: ಎಂಇಎಸ್ ಗಲಾಟೆ ಮಾಡಿದೆ ಅಂತ ನಾನು ಹೇಳಲ್ಲ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ತಡರಾತ್ರಿ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಗರದಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಧಾಂದಲೆ ಕುರಿತಂತೆ ಇದೀಗ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದು, ಇದೀಗ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಹಾಸ ಪಡುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಸದ್ಯ ಈ ಕುರಿತಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡುವುದು ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ. ನಾನು ಯಾವುದೋ ಸಂಘನೆ ಈ ಕೆಲಸ ಮಾಡಿದೆ ಎಂದು ಹೆಸರು ಹೇಳುವುದಿಲ್ಲ. ಅದು ಎಂಇಎಸ್ ಇದ್ದರೂ ಇರಬಹುದು. ಆದರೆ ಯಾರೋ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ. ಮೊದಲಿನಿಂದಲೂ ಬಿಜೆಪಿ ಸರ್ಕಾರ ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡಿತು. ಇದು ಈ ಘಟನೆಗೆ ಪ್ರಮುಖ ಕಾರಣವಾಗಿದೆ. ಆರೋಪಿಗಳು ಯಾರೇ ಆಗಿದ್ದರೂ ಸರ್ಕಾರ ಕೂಡಲೇ ಈ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಬೆಳಗಾವಿ ಪ್ರಕರಣದಲ್ಲಿ MESನ ಪ್ರಮುಖರನ್ನು ಬಂಧಿಸಲಾಗಿದೆ: ಬೊಮ್ಮಾಯಿ

ಕನ್ನಡ ಸಂಘಟನೆಗಳು ಕಾನೂನನ್ನು ಕೈಗೆತೆಗೆದುಕೊಳ್ಳಬಾರದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಲಿ, ಬೇರೆ ಪಕ್ಷದ ಕಾರ್ಯಕರ್ತರಾಗಲಿ ಯಾರು ಸಹ ಕಾನೂನನನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸರು ನಿರ್ಧಾಕ್ಷಿಣ್ಯಾವಾಗಿ ರಾಜಕಾರಣಿಗಳ ಮಾತನ್ನು ಬಿಟ್ಟು ಅವರ ಕರ್ತವ್ಯವನ್ನು ನಿಭಾಯಿಸಬೇಕು.

ಅಧಿವೇಶನದಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ರಾಜ್ಯದಲ್ಲಿಯೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಸ್ಟೇಷನ್ ಮುಂದೆ ಕಾಕಿ ಬಟ್ಟೆಯನ್ನು ಕಿತ್ತು ಹಾಕಿ, ಕಾವಿ ಬಟ್ಟೆ ಹಾಕಿಕೊಂಡು ಕುಳಿತುಕೊಂಡರೆ ಹೇಗಪ್ಪಾ? ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *