ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

Public TV
2 Min Read

– ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ
– ಬಣ್ಣ ಹಾಕದೇ, ಗ್ಲಿಸರಿನ್ ಇಲ್ಲದೇ ನಟನೆ ಡಿಕೆಶಿಗೆ ಒಲಿದು ಬಂದಿದೆ

ಚಿಕ್ಕಮಗಳೂರು: ಡಿಕೆಶಿ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಕಾಂಗ್ರೆಸ್ (Congress) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಸಿ.ಟಿ.ರವಿ (CT Ravi) ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೆಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗುವುದಕ್ಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗುವುದಕ್ಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನಾನು ಕೃಷಿಕ ಎಂದಿದ್ದ ಡಿಕೆಶಿಗೆ ಶಾಕ್‌ ನೀಡಲು ಸಿಬಿಐ ತಯಾರಿ

ಕಾಂತಾರ (Kantara) ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ (Rishab Shetty) ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ದರೂ ಡಿಕೆಶಿ ಪಾಲಿಗೆ. ಈ ರೀತಿಯ ಕಾಮೆಂಟ್‍ಗಳನ್ನು ನಾನು ನೋಡಿದ್ದೇನೆ. ಲೇಟಾಗಿದೆ, ಆದರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡುವುದು ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್

ಭಾರತವನ್ನು ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್, ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನು ಮತಾಂಧರ ಕೈಗೆ ಕೊಟ್ಟು ಬಂದರು. ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೇ ಸಾಯಬೇಕಾಯಿತು. ಇಂತಹ ವಿಭಜಿತ ಭಾರತವನ್ನು ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ. ಅದಕ್ಕೆ ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದ್ಯಾ? ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಪಶ್ಚಾತ್ತಾಪ ಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ? ಈ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ. ಪ್ರಿಯಾಂಕ ವಾದ್ರಾ ಅವರೇ ನೇತೃತ್ವ ವಹಿಸಿದ್ದರು. 387 ಸ್ಥಾನದಲ್ಲಿ ಠೇವಣಿ ಹೋಯಿತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *