ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ವೈದ್ಯ ದಂಪತಿ ಆತ್ಮಹತ್ಯೆ!

Public TV
1 Min Read

ಮೈಸೂರು: ವೈದ್ಯ ದಂಪತಿ ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಸರಸ್ವತಿಪುಂ 14ನೇ ಮೇನ್ ನಲ್ಲಿ ನಡೆದಿದೆ.

ಡಾ. ಸತೀಶ್ ಹಾಗೂ ಡಾ. ವೀಣಾ ಆತ್ಮಹತ್ಯೆಗೆ ಶರಣಾದ ದಂಪತಿ. ಕುಕ್ಕರಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇವರ ಮಗ ಮೃತಪಟ್ಟಿದ್ದ. ಏಕೈಕ ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಇವರು ಇಂದು ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.


ಸತೀಶ್ ಹಾಗೂ ವೀಣಾ ಮಗನನ್ನು ಕಳೆದು ಕೊಂಡು ನೋವಿನಲ್ಲಿದ್ದರು. ಈ ನೋವಿನಿಂದ ಹೊರಬರಲು ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ನಂತರ ಇಂದು ಮಧ್ಯಾಹ್ನ ಸರಸ್ವತಿ ಪುರಂನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *