ವಿಷಹಾಕಿ ನಾಯಿ ಕೊಂದು, ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ್ರು

Public TV
1 Min Read

ವಿಜಯಪುರ: ಮೊದಲು ನಾಯಿಗೆ ವಿಷಹಾಕಿ ಕೊಂದ ಬಳಿಕ ದುಷ್ಕರ್ಮಿಗಳು ಮಾಲೀಕನ ಕೊಲೆಗೆ ಸ್ಕೆಚ್ ಹಾಕಿ, ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ.

ತಡರಾತ್ರಿ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ದುಷ್ಕರ್ಮಿಗಳು ಈ ಕೃತ್ಯವೆಸೆಗಿದ್ದಾರೆ. ಆಲಮೇಲ ನಿವಾಸಿ ಬಸವರಾಜ್ ಗುರುಲಿಂಗಪ್ಪ ನನದಿ ಮೃತ ದುರ್ದೈವಿ. ಬಸವರಾಜ್ ಅವರನ್ನು ದುಷ್ಕಮಿಗಳು ತಡರಾತ್ರಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಬಸವರಾಜ್ ಪತ್ನಿಯನ್ನು ಹತ್ಯೆಗೈಯ್ಯಲು ದುಷ್ಕರ್ಮಿಗಳು ಪ್ರಯತ್ನಿಸಿದ್ದರು. ಈ ವೇಳೆ ಪತ್ನಿ ತೋಟದಲ್ಲಿ ಓಡಿಹೋಗಿ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಬಸವರಾಜ್ ಅವರ ಮನೆಯಲ್ಲಿ ಸಾಕಿದ್ದ ನಾಯಿಗೆ ದುಷ್ಕರ್ಮಿಗಳು ವಿಷ ಹಾಕಿ ಕೊಂದಿದ್ದರು. ಇದೇ ಬೆನ್ನಲ್ಲೇ ಈಗ ನಾಯಿ ಮಾಲೀಕನ ಕೊಲೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸದ್ಯ ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತ ಶ್ವಾನದಳದಿಂದ ದುಷ್ಕರ್ಮಿಗಳ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *