ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

Public TV
1 Min Read

ರಾಂಚಿ: ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆಗೈದ 7 ಆರೋಪಿಗಳಿಗೆ ಹೂಹಾರ ಹಾಕಿ ಆಕ್ರೋಶಕ್ಕೆ ಒಳಗಾಗಿದ್ದ ಜಯಂತ್ ಸಿನ್ಹಾ ವಿರುದ್ಧ ಇದೀಗ ತಂದೆ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಗರಂ ಆಗಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿನ್ಹಾ, ಮಗನ ಈ ಕಾರ್ಯವನ್ನು ಯಾವುದೇ ಕಾರಣಕ್ಕೂ ನಾನು ಒಪ್ಪಲು ಸಿದ್ಧನಿಲ್ಲ. ಈ ಹಿಂದೆ ನಾನು ಒಬ್ಬ ನಾಲಾಯಕ್ ಮಗನ ಅಪ್ಪನಾಗಿದ್ದೆ. ಆದ್ರೆ ಇದೀಗ ಪಾತ್ರಗಳು ಬದಲಾಗಿವೆ. ಇದು ಟ್ವಿಟ್ಟರ್ ಮಹಿಮೆ ಅಂತ ಹೇಳೋ ಮೂಲಕ ಮಗನ ವಿರುದ್ಧ ಕೆಂಡಾಮಂಡಲಾಗಿದ್ದಾರೆ.

ಏನಿದು ಘಟನೆ?:
ಕಳೆದ ವರ್ಷ ಜೂನ್ ತಿಂಗಳಲ್ಲಿ ಜಾರ್ಖಂಡ್ ನ ರಾಮ್ ಗ್ರಹ್ ನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಅವರನ್ನ ಕಾರಿನಿಂದ ಎಳೆದು ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ 11 ಮಂದಿ ಜೈಲು ಪಾಲಾಗಿದ್ದರು. ಇದೀಗ ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು.ಹೀಗಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಇವರೆಲ್ಲರೂ ರಾಂಚಿಯಲ್ಲಿರೋ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ.

ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗಿದ್ದು, ಇದೀಗ ಮಗ ಜಯಂತ್ ಸಿನ್ಹಾ ವಿರುದ್ಧ ತಂದೆ ಯಶ್ವಂತ್ ಸಿಂಗ್ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *