ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಕೋಪ ಗೊತ್ತಿಲ್ಲ: ಪೇಜಾವರ ಶ್ರೀ

Public TV
1 Min Read

ಉಡುಪಿ: ನಾವು ಯಾರಿಗೂ ಕೋಪ ಬರುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಅವರಿಗೆ ಯಾಕೆ ಕೋಪ ಇದೆ ಎನ್ನುವುದು ಗೊತ್ತಿಲ್ಲ. ಅವರು ಕೃಷ್ಣ ಮಠಕ್ಕೆ ಬರುತ್ತಾರೋ ಇಲ್ಲವೋ ಎನ್ನುವುದು ಭಾನುವಾರ ತಿಳಿಯಲಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹೇಳಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾನುವಾರ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಗೈರಾಗುತ್ತಿದ್ದಾರೆ ಎನ್ನುವ ವರದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರಿಗೆ ಕೃಷ್ಣಮಠದ ಪ್ರತಿನಿಧಿಗಳ ಮೂಲಕ ಆಹ್ವಾನ ನೀಡಿದ್ದೇವೆ. ಆದರೆ ಕಾರ್ಯದರ್ಶಿಗಳು ಉಡುಪಿ ಕಾರ್ಯಕ್ರಮಕ್ಕೆ ಸಿಎಂ ಬರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಮಠಕ್ಕೆ ಬರುತ್ತಾರೋ ಇಲ್ಲವೋ ಭಾನುವಾರ ತಿಳಿಯಲಿದೆ ಎಂದರು.

ನನ್ನ ಪರ್ಯಾಯದ ಸಂದರ್ಭದಲ್ಲಿ ಅವರಿಗೆ ಆಹ್ವಾನ ಮಾಡಿದ್ದೆ. ಹಲವು ಬಾರೀ ಮಠಕ್ಕೆ ಆಹ್ವಾನ ನೀಡಲಾಗಿದೆ. ನಾನು ಬರುವುದಿಲ್ಲ ಎಂದು ಸಿಎಂ ಅವರು ಹೇಳಿಲ್ಲ. ಆದರೆ ಒಂದು ಬಾರಿಯೂ ಮಠಕ್ಕೆ ಬಂದಿಲ್ಲ. ಮೊನ್ನೆ ಪರ್ಯಾಯದ ನಂತರ ಕೃಷ್ಣನಿಗೆ ಕಾಣಿಕೆ ಕಳುಹಿಸಿದ್ದರು. ಸಿಎಂ ಅವರ ಶ್ರೀಮತಿ ಫೋನ್‍ನಲ್ಲಿ ಮಾತನಾಡಿದ್ದರು ಎಂದು ಪೇಜಾವರ ಶ್ರೀ ತಿಳಿಸಿದರು.

ನಾನು ಸಿಎಂ ಅವರನ್ನು ಮಂಗಳೂರು, ಬೆಂಗಳೂರು, ಮೈಸೂರಲ್ಲಿ ಹಲವು ಬಾರಿ ಭೇಟಿಯಾಗಿದ್ದೇನೆ. ವರುಣಾ ಉಪಚುನಾವಣೆ ಸಂದರ್ಭ ಪ್ರಸಾದ ತೆಗೆದುಕೊಂಡು ಹೋಗಿದ್ದಾರೆ. ಸುತ್ತೂರು ಶ್ರೀಗಳು ಕೃಷ್ಣಮಠಕ್ಕೆ ಬರುವುದಾಗಿ ಹೇಳಿದ್ದರು. ಸಿಎಂ ಅವರನ್ನೂ ಜೊತೆ ಕರೆತರುವುದಾಗಿ ಹೇಳಿದ್ದಾರೆ ಎಂದು ಶ್ರೀಗಳು ಹೇಳಿದರು.

ಇದನ್ನೂ ಓದಿ:  ಧರ್ಮಸಂಕಟದಲ್ಲಿ ಸಿಎಂ ಸಿದ್ದರಾಮಯ್ಯ: ಕೃಷ್ಣ ಮಠಕ್ಕೆ ಹೋಗಲು ಹಿಂದೇಟು, 3 ಸಚಿವರಿಗೆ ರಾಷ್ಟ್ರಪತಿ ಕಾರ್ಯಕ್ರಮದ ಜವಾಬ್ದಾರಿ

 

Share This Article
Leave a Comment

Leave a Reply

Your email address will not be published. Required fields are marked *