ತುಮಕೂರು: ಇತ್ತಿಚಿನ ದಿನದಲ್ಲಿ ದಲಿತರಿಗಾಗಿ(Dalits) ಇರುವ ಅಟ್ರಾಸಿಟಿ (Atrocity Act) ಸೇರಿದಂತೆ ಕೆಲವು ಕಾನೂನುಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಮಾಜಿ ಸಚಿವ ಕೆ ಎನ್ ರಾಜಣ್ಣ (KN Rajanna) ಬೇಸರ ಹೊರಹಾಕಿದ್ದಾರೆ.
ತುಮಕೂರಿನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ಯುವ ಸಮೂಹವೇ ಈ ಕಾನೂನನ್ನು ಹೆಚ್ಚು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.
ದಲಿತರು ಬೇರೆ ಸಮುದಾಯದ ಪ್ರೀತಿ ವಿಶ್ವಾಸವನ್ನು ಗಳಿಸಬೇಕೇ ಹೊರತು ನಮಗಾಗಿ ಇರುವ ಕಾನೂನನ್ನು ಬೇರೆಯವರಿಗೆ ತೊಂದರೆ ಕೊಡಲು ಬಳಸಬಾರದು. ನಮ್ಮ ಹಕ್ಕನ್ನು ನಾವು ಪ್ರತಿಪಾದನೆ ಮಾಡೋಣ. ಅದರೆ ಆ ದಿಕ್ಕಿನಲ್ಲಿ ನಮಗಾಗಿ ಇರುವಂತಹ ಕಾಯ್ದೆಯನ್ನು ತಿರುಚಿ, ಬೇರೆಯವರ ದ್ವೇಷವನ್ನು ಕಟ್ಟಿಕೊಳ್ಳುವ ರೀತಿಯ ಕೆಲಸ ಆಗಬಾರದು ಎಂದು ಕಿವಿ ಮಾತು ಹೇಳಿದರು. ಇದನ್ನೂ ಓದಿ: ಇರಾನ್ ಅಧ್ಯಕ್ಷರ ಕಚೇರಿ ಮೇಲೆ ದಾಳಿ – ಐಆರ್ಜಿಸಿ, ಹೆಜ್ಬುಲ್ಲಾ ಕಮಾಂಡರ್ಗಳು ಫಿನಿಶ್

