ಭಯ ಬೇಡ, 3 ನೇ ಅಲೆ ಇನ್ನೂ ಬಂದಿಲ್ಲ: ತಜ್ಞರ ಜಾಗೃತಿ ಸಂದೇಶ

Public TV
1 Min Read

ನವದೆಹಲಿ: ಭಯ ಬೇಡ, 3 ನೇ ಅಲೆ ಇನ್ನೂ ಬಂದಿಲ್ಲ, 9 ರಾಜ್ಯಗಳಲ್ಲಿ ಕೋವಿಡ್-19 ಸಂಖ್ಯೆ ಹೆಚ್ಚಳದ ಬಗ್ಗೆ ತಜ್ಞರ ಜಾಗೃತರಾಗಿರಿ ಎನ್ನುವ ಸಂದೇಶವನ್ನು ನೀಡಿದ್ದಾರೆ.

ಕೋವಿಡ್-19 ಸೋಂಕು ಸಂಖ್ಯೆ 9 ರಾಜ್ಯಗಳ 50 ಜಿಲ್ಲೆಗಳಲ್ಲಿ ಏರುಗತಿಯಲ್ಲಿದ್ದು, ಓಮಿಕ್ರಾನ್ ರೂಪಾಂತರಿಯೂ ಪತ್ತೆಯಾಗುತ್ತಿರುವುದರಿಂದ 3 ನೇ ಅಲೆಯ ಆತಂಕ ಮೂಡಿದೆ. ಆದರೆ ಭಯಪಡುವ ಅಗತ್ಯವಿಲ್ಲ, ಮಹಾರಾಷ್ಟ್ರದಲ್ಲಿ ಓಮಿಕ್ರಾನ್‌ನ ಎರಡು ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶಾದ್ಯಂತ 23ಕ್ಕೆ ಹೊಸ ರೂಪಾಂತರಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ ಎಂದು ತಜ್ಞರ ಹೇಳಿದ್ದಾರೆ. ಇದನ್ನೂ ಓದಿ: ತಾಯಿಯೊಂದಿಗೆ ಸೇರಿ ಅಕ್ಕನನ್ನು ಕೊಂದ ತಮ್ಮ- ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ

10 ದಿನಗಳಲ್ಲಿ ರಾಜಸ್ಥಾನ, ತಮಿಳುನಾಡು, ಕೇರಳ, ದೆಹಲಿ, ಕರ್ನಾಟಕ, ಜಮ್ಮು-ಕಾಶ್ಮೀರ, ಒಡಿಶಾ, ಮಿಜೊರಾಮ್ ಗಳಲ್ಲಿ ಕೋವಿಡ್-19 ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಪತ್ರ ಬರೆದಿದ್ದು, ಸೋಂಕು ಪ್ರಸರಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಆರೋಗ್ಯ ತಜ್ಞರ ಪ್ರಕಾರ ಸಣ್ಣ ಪ್ರಮಾಣದ ರೋಗಲಕ್ಷಣಗಳು ಹಾಗೂ ರೋಗಲಕ್ಷಣ ರಹಿತರನ್ನು ಹೆಚ್ಚು ಪರೀಕ್ಷೆಗೊಳಪಡಿಸುತ್ತಿರುವುದರಿಂದ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ: ಸಮಂತಾ

 

Share This Article
Leave a Comment

Leave a Reply

Your email address will not be published. Required fields are marked *