ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

Public TV
1 Min Read

ವಿಜಯಪುರ: ಜಿಲ್ಲೆಯಲ್ಲಿ ಜೋಡಿ ಕೊಲೆ ಆಗಿವೆ. ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.

ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬುವವರ ಕೊಲೆಯಾಗಿದ್ದಾರೆ. ಇನ್ನು ಅಪರಿಚಿತರಿಂದ ಈ ಕೃತ್ಯ ನಡೆದಿದ್ದು, ಹತ್ಯೆಯ ನಂತರ ಹಂತಕರು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಇಬ್ಬರನ್ನು ಕೊಲೆಗೈದಿರೋ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

ಎರಡು ವರ್ಷಗಳ ಹಿಂದೆ ಈರನಗೌಡ ಎಂಬಾತನ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ತೀವ್ರ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದನಂತೆ. ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ ಸಂಶಯ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

Share This Article