ವರದಕ್ಷಿಣೆ ಕಿರುಕುಳದ ಆರೋಪ – ಮಗುವಿನ ಎದುರೇ ತಾಯಿ ನೇಣಿಗೆ ಶರಣು

Public TV
1 Min Read

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳದ ಆರೋಪದಡಿ ಮನನೊಂದ ಗೃಹಿಣಿ ತನ್ನ ಕಂದಮ್ಮನ ಎದುರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಕಸ್ತೂರಿಯಲ್ಲಿ ನಡೆದಿದೆ.

ಶಾಮಲ (26) ಮೃತ ಗೃಹಿಣಿ. ಶ್ಯಾಮಲ ಮದುವೆಯಾಗಿ 5 ವರ್ಷ ಆಗಿದ್ದು, ಒಂದು ಗಂಡು ಹಾಗೂ ಹೆಣ್ಣು ಮಗು ಇತ್ತು. ಕೆಲಸ ವಿಚಾರ ಹಾಗೂ ಬೇರೆ ಮನೆ ಮಾಡುವ ವಿಚಾರದಲ್ಲಿ ಅತ್ತೆ, ಮಾವ ಹಾಗೂ ಗಂಡನೊಂದಿಗೆ ಪದೇಪದೇ ಜಗಳಗಳು ನಡೆದಿದ್ದವು ಎನ್ನಲಾಗಿದೆ. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್

ಇದೇ ರೀತಿ ನಡೆದ ಜಗಳದಲ್ಲಿ ಎರಡನೇ ಮಗುವಿನ ಸಮೇತ ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮಗುವಿನ ಎದುರಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾಳೆ. ಸೊಸೆ ನೇಣು ಬಿಗಿದುಕೊಂಡಿರುವುದನ್ನು ಕಂಡು ಅತ್ತೆ ಕಿರುಚಾಡಿ ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಶ್ಯಾಮಲ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ ಬಿಜೆಪಿಯ ಸೃಷ್ಟಿ: ಈಶ್ವರ್‌ ಖಂಡ್ರೆ ಬಾಂಬ್‌

ಘಟನೆಯ ಸಂಬಂಧ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರಕುಳದ ಪ್ರಕರಣ ದಾಖಲಾಗಿದೆ.

Share This Article