ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಕೊಲೆ

Public TV
1 Min Read

ಹಾಸನ: ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೇಲೂರು ವತ ಮಾಯಗೌಡನಹಳ್ಳಿಯಲ್ಲಿ ನಡೆದಿದೆ.

ಪಂಕಜ (23) ಮೃತ ಮಹಿಳೆ. ಮೃತ ಪಂಕಜ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಂಚುಗಾರನಹಳ್ಳಿ ಗ್ರಾಮದವರು. ಪತಿ ನಾಗರಾಜ್ ಮದುವೆಯಾದಾಗಿನಿಂದಲೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು. ಇದರಿಂದಾಗಿಯೇ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಪಂಕಜ ಮತ್ತು ನಾಗರಾಜ್‌ಗೆ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿತ್ತು. ಈ ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಮದುವೆಯಾದ ನಾಲ್ಕು ವರ್ಷದಿಂದ ವರದಕ್ಷಿಣೆಗಾಗಿ ಪೀಡಿಸುತ್ತಿದ್ದನು ಎಂದು ತಿಳಿದು ಬಂದಿದೆ. ಬುಧವಾರ ರಾತ್ರಿ ಆರೋಪಿ ನಾಗರಾಜ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಮನೆಯಲ್ಲಿ ದರೋಡೆ ನಡೆದಿದೆ ಎಂದು ಕಥೆ ಕಟ್ಟಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದು ಆರೋಪಿ ಪತಿ ನಾಗರಾಜ್‍ನನ್ನು ಹಳೇಬೀಡು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *