ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ ಡಾ.ಪ್ರಯಾಗ್

Public TV
2 Min Read

ಬಿಗ್ ಬಾಸ್ ಮನೆಯಲ್ಲಿ ತಮ್ಮ ಬಗ್ಗೆ ತಪ್ಪು ಮಾಹಿತಿ ನೀಡಿದ್ದಲ್ಲದೇ, ಮಾನಹಾನಿ ಆಗುವಂತ ಮಾತುಗಳನ್ನು ಆಡಿರುವ ಕಾರಣದಿಂದಾಗಿ ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಡಾ.ಪ್ರಯಾಗ್ ಪರ ವಕೀಲರು. ಪಶು ವೈದ್ಯರಾಗಿರುವ ಡಾ.ಪ್ರಯಾಗ್ ಈ ಹಿಂದೆ ಬಿಬಿಎಂಪಿ ಯಲ್ಲಿ ನೋಡಲ್ ಅಧಿಕಾರಿಯಾಗಿದ್ದರು. ಕೊರೋನಾ ಅವಧಿಯಲ್ಲಿ ಅಧಿಕಾರಿ ಹೊಡೆದು ಟಾರ್ಚರ್ ಕೊಟ್ಟರು ಅಂತ ಬಿಗ್ ಬಾಸ್ ವೇದಿಕೆಯಲ್ಲಿ ಪ್ರತಾಪ್ ಮಾತನಾಡಿದ್ದರು.

ಪ್ರತಾಪ್ ಬಿಗ್ ಬಾಸ್ ವೇದಿಕೆಯಲ್ಲಿಯೇ  ಕ್ಷಮೆಯಾಚನೆ ಮಾಡಬೇಕು. ಲಿಖಿತ ರೂಪದಲ್ಲಿ ಕ್ಷಮೆಯಾಚನೆ ಮಾಡಬೇಕು ಎಂದು ವಕೀಲರ ಮೂಲಕ ಲೀಗಲ್ ನೋಟಿಸ್‌ ಕಳುಹಿಸಿದ್ದಾರೆ. ಲಿಖಿತ ರೂಪದಲ್ಲಿ ಕ್ಷಮೆಯಾಚನೆಯನ್ನು ಬರೆಯದೇ ಇದ್ರೇ ಮಾನನಷ್ಟ ಮೊಕದ್ದಮೆ ಹಾಕೋದಾಗಿ ನೋಟಿಸ್ ಕಳುಹಿಸಿದ್ದಾರೆ ಡಾ.ಪ್ರಯಾಗ್.

ಏನಿದು ಪ್ರಕರಣ?

ಬಿಗ್‍ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್‍ಗೆ ಸಂಕಷ್ಟ ಎದುರಾಗಿದೆ. ಕ್ವಾರಂಟೈನ್ ಕಹಾನಿ ಹೇಳಿಕೊಂಡು ಡ್ರೋಣ್ ಪ್ರತಾಪ್ (Drone Prathap) ಬಿಬಿಎಂಪಿ ನೋಡಲ್ ಅಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದರು. ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್‍ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟರು. ಹೋಟೆಲ್‍ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಅದನ್ನ ಸ್ವಲ್ಪ ಹೇಳಿದೆ. ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್‍ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋಣ್ ಪ್ರತಾಪ್ ಆರೋಪ ಮಾಡಿದ್ರು.

ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ. ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ (BBMP) ನೋಡಲ್ ಅಧಿಕಾರಿ ಹೇಳಿದ್ದರು.

 

ಆತನ ವೈಯಕ್ತಿಕ ವಿಚಾರ…. ತಂಗಿ, ಮದುವೆ, ತಾಯಿ ಯಾವುದೂ ನಾನು ಮಾತಾನಾಡಿಲ್ಲ. ಪ್ರತಾಪ್ ತಂದೆ ಬಹಳ ಒಳ್ಳೆಯವರು. ಬೇಕಾದ್ರೇ ಅವರನ್ನು ಕೇಳಲಿ. ಇದುವರೆಗೆ ಆತನಿಗೆ ಹಿಂಸೆ ಆಗಿದ್ದರೆ ಯಾಕೆ ನನ್ನ ವಿರುದ್ಧ ದೂರು ಕೊಡಲಿಲ್ಲ..?. ಆತನ ಮನೆಯ ವಾಚ್ ಮ್ಯಾನ್ ಇದ್ದ. ನಾವು ಅಪಾರ್ಟ್‍ಮೆಂಟ್ ಬೀಗ ಒಡೆದಿಲ್ಲ. ಪ್ರತಾಪ್ ಸುಳ್ಳು ಹೇಳ್ಕೊಂಡು ಟೋಪಿ ಹಾಕೋನು. ಆತನನ್ನು ಒಳ್ಳೆ ಹೋಟೆಲ್‍ನಲ್ಲಿ ಇರಿಸಿ ಉತ್ತಮ ಊಟ ಕೊಟ್ಟು ಇರಿಸಿದ್ದೇವೆ. ಇನ್ನೆರಡು ದಿನದಲ್ಲಿ ಕ್ಷಮೆಯಾಚನೆ ಮಾಡದೇ ಇದ್ರೇ ಕಾನೂನು ಹೋರಾಟ ಮಾಡುತ್ತೇನೆ. ಬಿಗ್ ಬಾಸ್ ವೇದಿಕೆಯಲ್ಲಿ ಕ್ಷಮೆಯಾಚನೆ ಮಾಡದೆ ಇದ್ರೇ ಮಾನನಷ್ಟ ಮೊಕದ್ದಮೆ ಹಾಕ್ತೇನೆ ಅಂತ ವಾರ್ನಿಂಗ್ ಕೊಟ್ಟಿದ್ದರು. ಇದೀಗ ನೋಟಿಸ್ ಕಳುಹಿಸಿದ್ದಾರೆ.

Share This Article