ವೀಡಿಯೋ: ಬೆಂಕಿ ಹೊತ್ತಿ ಧಗಧಗನೆ ಉರಿದ ಐಷಾರಾಮಿ ಬಸ್: 30 ಪ್ರಯಾಣಿಕರು ಪಾರು

Public TV
1 Min Read

ಹೈದರಾಬಾದ್: 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಐಷಾರಾಮಿ ಬಸ್‍ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ ಇಲ್ಲಿನ ಅಲೈರ್ ಬಳಿ ಈ ಘಟನೆ ನಡೆದಿದೆ. ವಾರಂಗಲ್‍ನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ತೆಲಂಗಾಣದ ಸರ್ಕಾರಿ ಬಸ್‍ನಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿತ್ತು. ಎಂಜಿನ್‍ನಿಂದ ಕಿಡಿ ಕಾಣಿಸಿಕೊಂಡಿದ್ದನ್ನು ನೋಡಿ ಚಾಲಕ ಕೂಡಲೇ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ರು. ಅದರಂತೆ ಪ್ರಯಾಣಿಕರು ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬಸ್ ಬೆಂಕಿಯಲ್ಲಿ ಸಂಪೂರ್ಣ ಭಸ್ಮವಾಗಿದ್ದು, ಇದರ ವೀಡಿಯೋ ದೃಶ್ಯಾವಳಿ ಲಭ್ಯವಾಗಿದೆ.

ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ನೆಲಮಂಗಲದ ಬಳಿಯೂ ಕೆಎಸ್‍ಆರ್‍ಟಿಸಿ ಬಸ್ ಬೆಂಕಿಗಾಹುತಿಯಾಗಿತ್ತು. ಘಟನೆಯಲ್ಲಿ ಓರ್ವ ಮಹಿಳೆ ಸಜೀವ ದಹನವಾಗಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.

Share This Article
Leave a Comment

Leave a Reply

Your email address will not be published. Required fields are marked *