ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ – ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ಬಿಡುಗಡೆ: ಡಿಕೆಶಿ

Public TV
1 Min Read

ಬೆಂಗಳೂರು: ಕುಡಿಯುವ ನೀರಿನ (Drinking Water) ಪೂರೈಕೆಗೆ ಬೆಂಗಳೂರಿನ (Bengaluru) ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ನೀರಿನ ಸಮಸ್ಯೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಸಿಲ್ಲಿ ಪ್ರಕರಣ: ಶರಣ ಪ್ರಕಾಶ್‌ ಪಾಟೀಲ್

ಪೋಸ್ಟ್‌ನಲ್ಲಿ ಏನಿದೆ?
ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ (Water Tanker) ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. ಈ ಸಂಬಂಧ ಬಿಡಬ್ಲ್ಯೂಎಸ್ಎಸ್‌ಬಿ (BWSSB) ಹಾಗೂ ಪಾಲಿಕೆ (BBMP) ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಶಿವರಾತ್ರಿ ದಿನ ಮತ್ತೆ ರಾಮೇಶ್ವರಂ ಕೆಫೆ ತೆರೆಯುತ್ತೇವೆ: ಮಾಲೀಕ ರಾಘವೇಂದ್ರ ರಾವ್‌


ಈ ವಿಚಾರವಾಗಿ ಮಾರ್ಚ್ 4ರಂದು ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಆಯುಕ್ತರು, ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಬಿಬಿಎಂಪಿ ಜೋನಲ್‌ ಕಮಿಷನರ್‌ಗಳು, ಜಂಟಿ ಆಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ನೀರು ಪೂರೈಸುವ ಟ್ಯಾಂಕರ್ ಗಳು ಸಾರ್ವಜನಿಕರಿಂದ ಮಿತಿ ಮೀರಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಸಹಾಯವಾಗುವ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯನ್ನು ಆಯೋಜಿಸಲಾಗಿದೆ.

 

Share This Article