ಪೆಟ್ರೋಲ್ ಹಾಕಿಸಿ ಚಿಲ್ಲರೆ ಕೇಳಿದ್ದಕ್ಕೆ ಡ್ರೈವರ್ ಮೇಲೆ ಹಲ್ಲೆ

Public TV
1 Min Read

ಬೆಂಗಳೂರು: ಪೆಟ್ರೋಲ್ ಹಾಕಿಸಿ ಚಿಲ್ಲರೆ ಕೇಳಿದ್ದಕ್ಕೆ ಡ್ರೈವರ್ ಮೇಲೆ ಹಲ್ಲೆ ನಡೆಸಲಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಸೋಲೂರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಈ ಘಟನೆ ನಡೆದಿದೆ. ಅಮಾಯಕ ಡ್ರೈವರ್ ಮುನಿಯಪ್ಪಗೆ ಬಂಕ್ ಮಾಲೀಕ ಶಿವಕುಮಾರ್ ಹಾಗೂ ಕ್ಯಾಷಿಯರ್ ದಿನೇಶ್ ಸೇರಿದಂತೆ ಐದು ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಮುನಿಯಪ್ಪ 500 ರೂ. ಗೆ ನೀಡಿ 100 ರೂ. ಮೌಲ್ಯದ ಪೆಟ್ರೋಲ್ ಹಾಕಿಸಿಕೊಂಡು ಉಳಿದ ಚಿಲ್ಲರೆ ಹಣ ಕೇಳಿದ್ದಕ್ಕೆ ಹಲ್ಲೆ ನಡೆದಿದೆ ಎಂದು ಮುನಿಯಪ್ಪ ಆರೋಪಿಸುತ್ತಾರೆ. ಮುನಿಯಪ್ಪಗೆ ತಲೆ, ಕೈ ಹಾಗೂ ಕಾಲು ಭಾಗದಲ್ಲಿ ಗಾಯಗಳಾಗಿದ್ದು, ಸೋಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಈ ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *