ರಾತ್ರಿ ವಿಶ್ರಾಂತಿ ಪಡೆದು, ಬೆಳಗ್ಗೆ ಬಸ್ಸಿನಲ್ಲೇ ಆತ್ಮಹತ್ಯೆಗೆ ಶರಣಾದ ಚಾಲಕ!

Public TV
0 Min Read

ಮಂಡ್ಯ: ಖಾಸಗಿ ಬಸ್ಸಿನೊಳಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ನಗರದ ಸಮೀಪ ಚಿಕ್ಕಮಂಡ್ಯ ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್(22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಾರ್ತಿಕ್ ಬಸ್ಸನ್ನು ಲೀಸ್‍ಗೆ ಪಡೆದು ಓಡಿಸುತ್ತಿದ್ದರು. ಕಾರ್ತಿಕ್ ತಂದೆ-ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದರು. ರಾತ್ರಿ ಚಿಕ್ಕಮಂಡ್ಯ ಗ್ರಾಮದ ಶನಿದೇವರ ದೇವಸ್ಥಾನ ಬಳಿ ಬಸ್ ನಿಲ್ಲಿಸಿ ಅದರೊಳಗೆ ವಿಶ್ರಾಂತಿ ಪಡೆಯುತ್ತಿದ್ದರು.

ಬೆಳಗ್ಗೆ ವೇಳೆಗೆ ಕಾರ್ತಿಕ್ ಬಸ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *