ಕುಡಿದ ಮತ್ತಿನಲ್ಲಿ ಬಸ್ ಚಾಲನೆ: ಆಟೋಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು

Public TV
1 Min Read

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಸ್ ಚಾಲನೆ ಮಾಡಿದ ಪರಿಣಾಮ ಕೆಎಸ್‍ಆರ್‍ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ.

ಬಿಲ್ಲಿನಕೋಟೆ ಮೂಲದ 29 ವರ್ಷದ ದೇವಿಕಾ ಮೃತ ಮಹಿಳೆ. ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಈ ಅವಘಡ ಸಂಭವಿಸಿದೆ. ಕೆಎಸ್‍ಆರ್‍ಟಿಸಿ ಬಸ್ ಚಾಲಕ ಕಂಠಪೂರ್ತಿ ಕುಡಿದು ಬಸ್ ಚಲಾಯಿಸುತ್ತಿದ್ದ ವೇಳೆ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಕೆಎಸ್‍ಆರ್‍ಟಿಸಿ ಬಸ್ ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ಚಾಲಕ ಪರಪ್ಪ ಎಂಬವನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಾಬಸ್‍ಪೇಟೆ ಪೊಲೀಸರು ಮತ್ತು ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *