ಕುಡಿದ ಮತ್ತಿನಲ್ಲಿ ಚರಂಡಿಯೊಳಗೆ ಬಿದ್ದ ವೃದ್ಧ

Public TV
1 Min Read

ಆನೇಕಲ್: ಕಂಠಪೂರ್ತಿ ಕುಡಿದಿದ್ದ ವೃದ್ಧ ಭಾರೀ ಮಳೆಗೆ ಜಲಾವೃತವಾಗಿದ್ದ ರಸ್ತೆಯ ಬದಿಯಲ್ಲಿದ್ದ ತೆರೆದ ಚರಂಡಿಯೊಳಗೆ ಬಿದ್ದು, ಗಾಯಗೊಂಡಿರುವ ಘಟನೆ ಅತ್ತಿಬೆಲೆ ಗಡಿ ಹೊಸೂರಿನಲ್ಲಿ ನಡೆದಿದೆ.

ಕಂಠಪೂರ್ತಿ ಕುಡಿದು ರಸ್ತೆ ಬದಿಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದ ವೃದ್ಧ ಭಾರೀ ಮಳೆಗೆ ಜಲಾವೃತವಾಗಿದ್ದ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾನೆ. ಟ್ರಾಫಿಕ್ ಜಾಮ್‌ನಲ್ಲಿ ವೃದ್ಧ ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದುದನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿಯುತ್ತಿದ್ದರು. ಈ ವೇಳೆ ವೃದ್ಧ ಚರಂಡಿಯೊಳಗೆ ಬಿದ್ದಿದ್ದು, ಈ ದೃಶ್ಯವೂ ಸೆರೆಯಾಗಿದೆ. ಇದನ್ನೂ ಓದಿ: ಸಿಮ್ ಕಾರ್ಡ್ ಇಲ್ಲದ ಮೊಬೈಲ್, ಖಾಲಿ ಹಾಳೆ ಕೈಗಿತ್ತು ಹೆತ್ತಮ್ಮನನ್ನೇ ಬಿಟ್ಟು ಹೋದ

ಚರಂಡಿಯೊಳಗೆ ಬಿದ್ದಿದ್ದ ವೃದ್ಧ ಮಳೆಯ ಆರ್ಭಟಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ. ಸದ್ಯ ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ಬದುಕುಳಿದಿದ್ದಾನೆ. ವೃದ್ಧ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರು ಆತನನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ಸಚಿವರ ಹಿಂಬಾಲಕರಿಂದ ನಡೀತಿದ್ಯಾ ವರ್ಗಾವಣೆ ದಂಧೆ..?

ಘಟನೆಯಲ್ಲಿ ವೃದ್ಧನ ತಲೆಗೆ ಗಾಯವಾಗಿ ರಕ್ತ ಬರುತ್ತಿದ್ದರೂ ಬಳಿಕ ಬಂದ ಪೊಲೀಸರ ಜೊತೆಗೂ ತಾನು ಆಸ್ಪತ್ರೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಕೊನೆಗೆ ವೃದ್ಧನ ಮನವೊಲಿಸಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *