ನಟ ದುನಿಯಾ ವಿಜಯ್ ಹೆಸರಲ್ಲಿ ಸುಲಿಗೆ- ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂಧನ

Public TV
1 Min Read

ದಾವಣಗೆರೆ: ಗ್ರಾಹಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ವಜ್ರದ ವ್ಯಾಪಾರಿ ಸೋಗಿನಲ್ಲಿ ಗ್ರಾಹಕರನ್ನ ಬಂಧಿಸಿ, ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಎಚ್.ಎಸ್. ದೊಡ್ಡೇಶ್, ಬೆಳ್ಳಿಬೆಟ್ಟ ಚಿತ್ರದ ನಿರ್ಮಾಪಕ ಹಾಗೂ ಹೊನ್ನಾಳಿ ತಾಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಉತ್ತೇಶ್‍ನನ್ನು ಬಂಧಿಸಲಾಗಿದೆ.

ಆರೋಪಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಬರೇಜ್ ಎ ಶೇಕ್ ಎನ್ನುವ ವ್ಯಕ್ತಿಗೆ ವಜ್ರ ಕೊಡುವುದಾಗಿ ನಂಬಿಸಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ರು. ಮನಬಂದಂತೆ ಹಿಂಸೆ ಕೊಟ್ಟು ಆಸ್ತಿ ವಿವರ, ಬ್ಯಾಂಕ್ ಬ್ಯಾಲೆನ್ಸ್ ಪಡೆದು ಪೊಲೀಸರಿಗೆ ದೂರು ನೀಡಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ರು. ದೊಡ್ಡೇಶ್, ಉತ್ತೇಶ್ ಮತ್ತು ನಿವೃತ್ತ ತಹಸೀಲ್ದಾರ್ ಪುತ್ರ ಗುರುರಾಜ್ ಶ್ರೀಮಂತರನ್ನ ಗುರಿಯಾಗಿಸಿಕೊಂಡು ಇದೇ ರೀತಿ ದಂಧೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸದ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 36 ಸಾವಿರ ರೂ. ನಗದು, 1 ಫೋರ್ಡ್, 1 ಬೆನ್ಜ್ ಕಾರು, 3 ಮೊಬೈಲ್ ವಶಕ್ಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *