KIADB ಅಧಿಕಾರಿಗಳ ಮನೆಯಲ್ಲಿ 2 ಕೋಟಿ ಜಪ್ತಿ – ಇಡಿ ದಾಳಿ ನಡೆಸಿದ್ದು ಯಾಕೆ?

Public TV
1 Min Read

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (KIADB) ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಂಗಳೂರು (Bengaluru) ಮತ್ತು ಧಾರವಾಡದ (Dharwada) ಕೆಐಎಡಿಬಿ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ಮುಂದುವರಿದಿದ್ದು ಅಧಿಕಾರಿಗಳ ಮನೆಯಲ್ಲಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶೋಧ ಕಾರ್ಯ ನಡೆಯುತ್ತಿದೆ. ಕಚೇರಿಯ ದಾಖಲೆಗಳನ್ನು ತೆಗೆದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಶೀಘ್ರವೇ ಭಾರತದ ದೊಡ್ಡ ಸುದ್ದಿ: ಬ್ರೇಕಿಂಗ್‌ ನ್ಯೂಸ್‌ ಕೊಟ್ಟ ಹಿಂಡನ್‌ಬರ್ಗ್‌

 

ದಾಳಿ ಮಾಡಿದ್ದು ಯಾಕೆ?
ಭೂ ಸ್ವಾಧೀನ ಹೆಸರಿನಲ್ಲಿ ಕೋಟ್ಯಂತರ ರೂ. ಹಣವನ್ನು ಕೆಐಎಡಿಬಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂದು ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆ ತೋರಿಸಿ ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್‌ ಖಾತೆ ತೆರೆಯಲಾಗಿದೆ. ಈ ಅಕ್ರಮ ಎಸಗಲು ಐಡಿಬಿಐ ಬ್ಯಾಂಕ್‌ನಲ್ಲಿ 24 ಖಾತೆ ತೆರೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದ ಪದಕ ವಿಜೇತ ಅಮನ್‌

 

Share This Article