ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ – ಆಗಸ್ಟ್ 18ರಂದು ಚಾಲನೆ

By
1 Min Read

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ ನಂತರ ಶಿಕ್ಷಣ (Education) ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

ಶಿವಮೊಗ್ಗದಲ್ಲಿ (Shivamogga) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ (Mandya) ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು. ಇದನ್ನೂ ಓದಿ: ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ: ಪರಮೇಶ್ವರ್

ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕವಿದ್ದು, ಹೆಚ್ಚಿನ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಉದ್ಘಾಟಿಸಲಾಗುವುದು ಎಂದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸದ್ಯದಲ್ಲಿ ಹೋಬಳಿಗೊಂದು ಶಾಲೆಯನ್ನು ಆರಂಭಿಸಲಾಗುವುದು ಮುಂದಿನ ದಿನಗಳಲ್ಲಿ ಎರಡು ಮೂರು ಗ್ರಾಮ ಪಂಚಾಯ್ತಿಗೆ ಒಂದರಂತೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಅದೇನ್ ಬಿಚ್ಚಿಡ್ತಾರೋ ಬಿಚ್ಚಿಡಲಿ- ಹೆಚ್‍ಡಿಕೆಗೆ ಡಿಕೆಶಿ ಸವಾಲು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್