– ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
ಅಮರಾವತಿ: ಆಂಧ್ರಪ್ರದೇಶದಲ್ಲಿ (Andhra Pradesh) ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಬೃಹತ್ ರ್ಯಾಲಿ ನಡೆಸುವ ವೇಳೆ ಭಾರೀ ಅವಘಡ ಸಂಭವಿಸಿದೆ. ಜಗನ್ ತೆರಳುತ್ತಿದ್ದ ಕಾರಿನಡಿ ಸಿಲುಕಿ 55 ವರ್ಷ ವ್ಯಕ್ತಿ ಮೃತಪಟ್ಟಿದ್ದಾರೆ.
ಚೀಲಿ ಸಿಂಗಯ್ಯ ಮೃತ ವ್ಯಕ್ತಿ. ಸಿಂಗಯ್ಯ ಜಗನ್ ಮೋಹನ್ ರೆಡ್ಡಿಯ ದೊಡ್ಡ ಅಭಿಮಾನಿಯಾಗಿದ್ದರು. ಜೂನ್ 18ರಂದು ಗುಂಟೂರಿನಲ್ಲಿ ಜಗನ್ ಬೃಹತ್ ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಜಗನ್ ನೋಡಲು ಬಂದ ವೇಳೆ ನೂಕು ನುಗ್ಗಲು ತಳ್ಳಾಟವಾಗಿ ಸಿಂಗಯ್ಯ ಕೆಳಗೆ ಬಿದ್ದಿದ್ದಾರೆ. ಇದನ್ನೂ ಓದಿ: ದೊಡ್ಡ ದೊಡ್ಡ ಡ್ರೋನ್ ಬಳಸಿ ಹವಾಯ್ಗೆ ಸೊಳ್ಳೆಗಳ ಬಿಡುಗಡೆ – ಇಲ್ಲದಿದ್ರೆ ಈ ಜೀವಸಂಕುಲವೇ ನಾಶವಾಗುತ್ತಂತೆ!
ಈ ವೇಳೆ ಕಾರು ಚಾಲಕನಿಗೆ ಕಾಣದೇ ಸಿಂಗಯ್ಯ ಮೇಲೆ ಕಾರು ಹರಿಸಿದ್ದಾನೆ. ಕೂಡಲೇ ಕಾರು ನಿಲ್ಲಿಸಿದರೂ ತಲೆಗೆ ಗಂಭೀರ ಗಾಯವಾಗಿದ್ದರಿಂದ ಇಂದು ಸಿಂಗಯ್ಯ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ