ಧರಣಿ ಸತ್ಯಾಗ್ರಹ ನಿರತ ವಯೋವೃದ್ಧ ಏಕಾಏಕಿ ಅಸ್ವಸ್ಥ

Public TV
1 Min Read

ಬೀದರ್: ಧರಣಿ ನಿರತ ವಯೋವೃದ್ಧ ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ.

‘ಬೇಡ ಜಂಗಮ’ ಜಾತಿ ಪ್ರಮಾಣ ಪತ್ರ ನೀಡುವಂತೆ ಜಂಗಮರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. 28 ದಿನಗಳಿಂದ ಭಾಲ್ಕಿ ತಹಶಿಲ್ದಾರ್ ಕಚೇರಿ ಮುಂಭಾಗ ಜಂಗಮರು ಧರಣಿ ಸತ್ಯಾಗ್ರಹ ಮಾಡುತ್ತಿದ್ದು, ತಡರಾತ್ರಿ ಧರಣಿ ನಿರತ ರಾಚಯ್ಯ ಸ್ವಾಮಿ ವಯೋವೃದ್ಧ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ

ಅಸ್ವಸ್ಥಗೊಂಡ ರಾಚಯ್ಯ ಸ್ವಾಮಿ ಅವರನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

28 ದಿನಗಳಿಂದ ‘ಬೇಡ ಜಂಗಮ’ ಜಾತಿ ಪ್ರಮಾಣ ಪತ್ರಕ್ಕಾಗಿ ಜಂಗಮರು ನಿರಂತರವಾಗಿ ಧರಣಿ ಸತ್ಯಾಗ್ರಹ ಮಾಡುತ್ತಿದ್ರು ಸ್ಪಂದಿಸದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಧರಣಿ ನಿರತ ಜಂಗಮರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದನ್ನೂ ಓದಿ: ಕೋಮು ಪ್ರಚೋದಿಸುತ್ತಿದ್ದ ದೆಹಲಿ ಮೂಲದ ಓರ್ವ ಸೇರಿ ಇಬ್ಬರು ಅರೆಸ್ಟ್ 

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *