ಪಂಚರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿ, ರೋಡ್ ಶೋ ಗಳಿಗೆ ಜ.31ರ ವರೆಗೆ ನಿರ್ಬಂಧ

Public TV
2 Min Read

ನವದೆಹಲಿ: ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ ಪಕ್ಷಗಳು ಭೌತಿಕವಾಗಿ ರೋಡ್ ಶೋ, ಸಭೆ-ಸಮಾರಂಭ, ರ‍್ಯಾಲಿಗಳನ್ನು ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಕೇಂದ್ರ ಚುನಾವನಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಪಂಚರಾಜ್ಯಗಳ ಚುನಾವಣಾ ಮುಖ್ಯಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯ ಬಳಿಕ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಮುಖ್ಯ ಆಯುಕ್ತ ಸುಶೀಲ್ ಕುಮಾರ್ ದೇಶದಲ್ಲಿ ಕೊರೊನಾ ಮೂರನೇ ಅಲೆ ಇರುವುದರಿಂದಾಗಿ ಮುಂದಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಸಂದರ್ಭ ಜನ ಸೇರಿಸಿಕೊಂಡು ರ‍್ಯಾಲಿ, ಸಭೆ, ರೋಡ್ ಶೋ ಮಾಡಲು ಅವಕಾಶ ನಿರಾಕರಿಸಲಾಗಿದೆ. ಆದರೆ ಈ ನಡುವೆ ನಿಗದಿತ ಜನಸಂಖ್ಯೆಯನ್ನು ಸೇರಿಸಿಕೊಂಡು ಪ್ರಚಾರಕ್ಕೆ ಅವಕಾಶ ಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ: ಮಾಯಾವತಿ ಪ್ರಚಾರದಲ್ಲಿ ಸಕ್ರಿಯವಾಗಿಲ್ಲ ಯಾಕೆ – ಆಶ್ಚರ್ಯವಾಗ್ತಿದೆ ಎಂದ ಪ್ರಿಯಾಂಕಾ

ಚುನಾವಣಾ ಆಯೋಗ ಜನವರಿ 15 ರಂದು ಈ ಅವಧಿಯನ್ನು ಜನವರಿ 22 ರವರೆಗೆ ವಿಸ್ತರಿಸಿತು. ಇದೀಗ ಈ ಅವಧಿಯನ್ನು ಮತ್ತೆ ಜನವರಿ 31ರ ವರೆಗೆ ವಿಸ್ತರಿಸಿದೆ. ಜೊತೆಗೆ ಜನವರಿ 28ರ ಬಳಿಕ ಈ ನಿಯಮದಲ್ಲಿ ಕೊಂಚ ಸಡಿಲಿಕೆ ನೀಡಿ ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ಜನರು ಅಥವಾ ಸಭಾಂಗಣದ ಸಾಮರ್ಥ್ಯದ ಶೇಕಡಾ 50 ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ನಿರ್ಬಂಧ ಸಡಿಲಿಕೆ ನೀಡಿದೆ. ಜೊತೆಗೆ ಮನೆ ಮನೆ ಪ್ರಚಾರ ಮಾಡಲು ಕೇವಲ 5 ರಿಂದ 10 ಜನರ ಗುಂಪಿಗೆ ಮಾತ್ರ ಅವಕಾಶ ನೀಡಿದೆ. ಇದನ್ನೂ ಓದಿ: ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

ವಿಶಾಲವಾದ ಮೈದಾನಗಳಲ್ಲಿ 500 ರಷ್ಟು ಜನ ಅಥವಾ 50% ಜನರಿಗೆ ಸೇರಲು ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಫೆಬ್ರವರಿ 1 ನಂತರ ಎಂದು ಸ್ಪಷ್ಟಪಡಿಸಿದೆ. ಕೇಂದ್ರ ಚುನಾವಣಾ ಆಯೋಗವು ಜನವರಿ 8 ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸಿತು. ಪಂಚರಾಜ್ಯಗಳಲ್ಲಿ ಫೆಬ್ರವರಿ 10 ರಂದು ಚುನಾವಣೆ ಆರಂಭಗೊಂಡು ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ದುಡಿದ ಹಣವನ್ನ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಮುಡಿಪಾಗಿಟ್ಟ ಆಟೋ ಚಾಲಕ

Share This Article
Leave a Comment

Leave a Reply

Your email address will not be published. Required fields are marked *