ಮಂಡ್ಯಕ್ಕೆ ನೀರು – ಸರ್ಕಾರದ ಮುಖ್ಯಕಾರ್ಯದರ್ಶಿಗೆ ಚುನಾವಣಾ ಅಧಿಕಾರಿಗಳಿಂದ ನೋಟಿಸ್

Public TV
1 Min Read

ಬೆಂಗಳೂರು: ಮಗನಿಗಾಗಿ ಬೆಂಗಳೂರು ಕುಡಿಯುವ ನೀರನ್ನು ಮಂಡ್ಯಕ್ಕೆ ಹರಿಸಲು ಸಿಎಂ ಸೂಚಿಸಿದ್ದಾರೆ ಎನ್ನಲಾದ ಸುದ್ದಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಚುನಾವಣಾ ಅಧಿಕಾರಿಗಳು ವಿವರಣೆ ಕೋರಿ ನೋಟಿಸ್ ಜಾರಿಮಾಡಿದ್ದಾರೆ.

ಚುನಾವಣೆಯಲ್ಲಿ ಮಗ ನಿಖಿಲ್ ಗೆಲ್ಲಿಸಲು ಬೇಸಿಗೆಯಲ್ಲಿ ಬೆಂಗಳೂರು ನಗರಕ್ಕೆ ಮೀಸಲಿಟ್ಟಿದ್ದ ಕೆಆರ್ ಎಸ್ ನೀರನ್ನು ಮಂಡ್ಯ ಜಿಲ್ಲೆಗೆ ಹರಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ಪಬ್ಲಿಕ್ ಟಿವಿ ಮೂಲಗಳನ್ನು ಆಧಾರಿಸಿ ಸುದ್ದಿಯನ್ನು ಪ್ರಸಾರ ಮಾಡಿತ್ತು. ಈ ವರದಿಯನ್ನಾಧರಿಸಿ ಸರ್ಕಾರದ ನಡೆಯನ್ನು ಖಂಡಿಸಿ ಚುನಾವಣಾಧಿಕಾರಿಗಳಿಗೆ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಾಹಂ ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಎಷ್ಟು ಪ್ರಮಾಣದಲ್ಲಿ ಕಾಲುವೆಗಳಿಗೆ ನೀರು ಬಿಡಲಾಗಿದೆ? ಬೆಂಗಳೂರಿಗೆ ಎಷ್ಟು ನೀರು ಮೀಸಲಾಗಿದೆ? ಈ ಆರೋಪದ ಬಗ್ಗೆ ಸರ್ಕಾರದ ಸ್ಪಷ್ಟನೆ ಏನು? ಎಂದು ಪ್ರಶ್ನಿಸಿ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೆ ಈ ಬಗ್ಗೆ ಸಂಜೆಯೊಳಗೆ ವರದಿ ನೀಡುವಂತೆ ಚುನಾವಣಾಧಿಕಾರಿಗಳು ತಾಕೀತು ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *