ಏಕಾಏಕಿ ಬೈಕ್‍ಗೆ ಎದುರಾದ ಕಾಡಾನೆ – ವಿದ್ಯಾರ್ಥಿ ಬಲಿ

Public TV
1 Min Read

ಮಡಿಕೇರಿ: ಬೈಕಿನಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದ ಸಂದರ್ಭ ಹಠಾತನೆ ಕಾಡನೆಯೊಂದು ಕಾಫಿ ತೋಟದಿಂದ ರಸ್ತೆಗೆ ಬಂದು ಬೈಕ್ ಸವಾರರ ಮೇಲೆ ದಾಳಿ ಮಾಡಿ ವಿದ್ಯಾರ್ಥಿಯೋರ್ವ ನನ್ನು ಕೊಂದು ಹಾಕಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.

ಕಾಡಾನೆ ದಾಳಿಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ ಪುತ್ರ ವಿದ್ಯಾರ್ಥಿ ಆಶಿಕ್ (19) ಮೃತ ದುರ್ದೈವಿ. ಸಂಜೆ ಸಮಯದಲ್ಲಿ ಅರೆಕಾಡಿನಿಂದ ನೆಲ್ಯಹುದಿಕೇರಿಗೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ಹಠಾತನೆ ಕಾಡನೆಯೊಂದು ಕಾಫಿ ತೋಟದಿಂದ ರಸ್ತೆಗೆ ಬಂದು ಬೈಕ್ ಸವಾರರ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: ಗೂಳಿಗಳ ಗುದ್ದಿಗೆ ಸೈಲೆಂಟ್ ಆದ ಗುಜರಾತ್ ಜೈಂಟ್ಸ್

ಕಾಡಾನೆ ದಾಳಿಗೆ ಆಶಿಕ್ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಆಶಿಕ್ ನನ್ನು ಗ್ರಾಮಸ್ಥರು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸುವ ಸಂದರ್ಭ ಸಾವನ್ನಪ್ಪಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ಅಸ್ಮಿಲ್ (19) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಸಿದ್ದಾಪುರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ:  ಧಗ ಧಗ ಉರಿಯುವ ಬೆಂಕಿ ಮೈ ಆವರಿಸಿದ್ದರೂ ರಸ್ತೆಗೆ ಓಡಿದ ದಂಪತಿ

Share This Article
Leave a Comment

Leave a Reply

Your email address will not be published. Required fields are marked *