ಬೆಳಗಾವಿಯ ಚಿರತೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲಿನಿಂದ ಅರ್ಜುನ್, ಆಲೆ ಆಗಮನ 

Public TV
1 Min Read
ಬೆಳಗಾವಿ: ನಗರದ ಗಾಲ್ಫ್ ಕ್ಲಬ್‍ನಲ್ಲಿ ಅಡಗಿರುವ ಚಿರತೆ ಪತ್ತೆ ಕಾರ್ಯಾಚರಣೆ 20ನೇ ದಿನಕ್ಕೆ ಕಾಲಿಟ್ಟಿದ್ದು, ಚಿರತೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಎರಡು ಆನೆಗಳನ್ನು ಕರೆ ತರಲಾಗಿದೆ.
ನಗರದ ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ 22 ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಇಂದು ಕೂಡ ಮುಂದುವರಿಸಲಾಗಿದೆ. 250 ಎಕರೆ ಪ್ರದೇಶದಲ್ಲಿ ಇರುವ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆ ಸೆರೆಗೆ ಇಂದಿನಿಂದ ಎರಡು ಆನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಲಿದೆ. ಶಿವಮೊಗ್ಗದ ಸಕ್ರೆಬೈಲ್ ಬಿಡಾರದಿಂದ ಇಂದು ಮಧ್ಯರಾತ್ರಿ ಎರಡು ಆನೆಗಳನ್ನು ಕರೆತರಲಾಗಿದೆ. ಅರ್ಜುನ್ ಮತ್ತು ಆಲೆ ಎನ್ನುವ ಎರಡು ಆನೆಗಳನ್ನು ಬಳಸಿ ಇಂದು ಕೊಂಬಿಂಗ್ ಮಾಡಲಾಗುತ್ತದೆ. ಆನೆಗಳ ಜೊತೆಗೆ ಡಾರ್ಟ್ ಸ್ಪೆಷಲಿಸ್ಟ್ ಡಾ. ವಿನಯ್ ಸಹ ಬೆಳಗಾವಿಗೆ ಆಗಮಿಸಿದ್ದು, ಡಾ. ವಿನಯ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ. ಇದನ್ನೂ ಓದಿ: 400 ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ
ಇತ್ತೀಚೆಗೆ ಡಾ.ವಿನಯ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಚಿರತೆ ಸೆರೆ ಹಿಡಿಯಲಾಗಿತ್ತು. ಹೀಗಾಗಿ ಅವರ ಜೊತೆಗೆ ನುರಿತ ಮಾವುತರು, ಕವಾಡಿಗಳು ಹಾಗೂ ಬೆಳಗಾವಿಯಲ್ಲಿ ಸದ್ಯ ಇರುವ ಇಬ್ಬರು ಡಾರ್ಟ್ ಸ್ಪೆಷಲ್ ಶೂಟರ್ಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. 80ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಜೊತೆಗೆ ಇಂದಿನಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕ್ಲಬ್ ಸುತ್ತಮುತ್ತಲಿನ ಹಲವು ಬಡಾವಣೆಗಳ ಜನರಿಗೆ ಆತಂಕ ಮೂಡಿದ್ದು, ಆದಷ್ಟು ಬೇಗ ಚಿರತೆ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ- ಮಾನಸಿಕ ಅಸ್ವಸ್ಥ ಬಲಿ
Live Tv
[brid partner=56869869 player=32851 video=960834 autoplay=true]
Share This Article
Leave a Comment

Leave a Reply

Your email address will not be published. Required fields are marked *