ಮೈಸೂರು: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ಉದ್ಯೋಗಿಯೊಬ್ಬ ಸರ್ಕಾರಿ ಕಚೇರಿಯ ಕೊಠಡಿಯಲ್ಲಿನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ.
ಹೊರ ಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ ಉದ್ಯೋಗಿ. ಕಳೆದ 6 ತಿಂಗಳಿಂದ ಸಂಬಳ ನೀಡದ್ದಕ್ಕೆ ಬೇಸರಗೊಂಡಿದ್ದ ಉದ್ಯೋಗಿ ದೀಪಕ್ ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದಾನೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಚೇರಿಯಲ್ಲೇ ನೇಣಿಗೆ ಶರಣಾಗಲು ಯತ್ನಿಸಿ ಟವೆಲ್ ನಿಂದ ಫ್ಯಾನ್ಗೆ ಬಿಗಿದುಕೊಳ್ಳಲು ಮುಂದಾಗಿದ್ದಾನೆ. ಇದನ್ನೂ ಓದಿ: ಹನಿಮೂನ್ ಮರ್ಡರ್ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು
ತಕ್ಷಣ ದೀಪಕ್ನನ್ನು ಸಹ ಸಿಬ್ಬಂದಿ ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವಿಚಾರಕ್ಕೆ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ. ಘಟನೆ ನಂತರ ಈ ದಿನವೇ ಸಂಬಳ ಹಾಕಲಾಗುತ್ತೆ ಎಂದು ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಹೇಳಿದ್ದಾರೆ. ಇದನ್ನೂ ಓದಿ: 1 ಲಕ್ಷ ಕ್ಯೂಸೆಕ್ ದಾಟಿದ ಕೃಷ್ಣೆಯ ಒಳಹರಿವು – ನದಿ ತೀರದಲ್ಲಿ ಪ್ರವಾಹದ ಆತಂಕ
ಆತ ಹೊರ ಗುತ್ತಿಗೆ ನೌಕರ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಸಂಬಳ ಹಾಕುತ್ತೇವೆ. ನಮ್ಮಲ್ಲಿ ಒಟ್ಟು 16 ಜನ ಹೊರ ಗುತ್ತಿಗೆ ನೌಕರರಿದ್ದಾರೆ. ಎಲ್ಲರಿಗೂ ಏಜೆನ್ಸಿ ಮೂಲಕವೇ ಸಂಬಳ ಆಗುತ್ತೆ. ಅದಕ್ಕು ನಮಗೂ ಸಂಬಂಧ ಇಲ್ಲ ಎಂದ ಸಹಾಯಕ ನಿರ್ದೇಶಕ ಹೇಳಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | 24 ಗಂಟೆಯಲ್ಲಿ 5 ಕಡೆ ಮೇಘಸ್ಫೋಟ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ