ಚುನಾವಣೆ ಸಂದರ್ಭದಲ್ಲಿ ED ನನ್ನನ್ನು ಬಂಧಿಸಲುಬಹುದು – ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಕೆಜಿಎಫ್ ಬಾಬು

Public TV
1 Min Read

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ (Money Laundering Case) ತನಿಖೆ ನಡೆಸುತ್ತಿರುವ ಇಡಿ (ED) ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ನನ್ನನ್ನು ಬಂಧಿಸಲುಬಹುದು, ನಾನು ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಉದ್ಯಮಿ ಕೆಜಿಎಫ್ ಬಾಬು (KGF Babu) ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಗುರುವಾರದಿಂದ ತನಿಖೆ ನಡೆಸುತ್ತಿದ್ದಾರೆ. ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ ಮತ್ತೆ ಈಗ ಸೋಮವಾರಕ್ಕೆ ಸಮನ್ಸ್ (Summons) ನೀಡಿದ್ದಾರೆ. ಸೋಮವಾರ ಬೆಳಗ್ಗೆ ಹನ್ನೊಂದು ಗಂಟೆಗೆ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪ, ಮಗಳ ರಾಜಕಾರಣಕ್ಕೆ ಅಂತ್ಯ ಹಾಡಲು ವಿಜಯಸಂಕಲ್ಪ ಅಭಿಯಾನ: ನಳಿನ್ ಕುಮಾರ್ ಕಟೀಲ್

ವಿಚಾರಣೆ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗಳನ್ನೆ ಪದೇ ಪದೇ ಕೇಳುತ್ತಿದ್ದಾರೆ ನಾನು ಎಲ್ಲದಕ್ಕೂ ಉತ್ತರ ನೀಡುತ್ತಿದ್ದೇನೆ. ಆದರೆ ಅವರು ನನ್ನ ಉತ್ತರದಿಂದ ತೃಪ್ತರಾದಂತೆ ಕಾಣುತ್ತಿಲ್ಲ ಹೀಗಾಗಿ ಸಮನ್ಸ್ ನೀಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಂಧಿಸುತ್ತಾರ ಎನ್ನುವುದು ಗೊತ್ತಿಲ್ಲ. ಆದರೆ ಅವರ ಕೈಯಲ್ಲಿ ಅಧಿಕಾರ ಇದೆ ಯಾವುದನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *