ಬರ್ತ್ ಡೇ ಪಾರ್ಟಿಗೆ ಹೋಗಿ ಬಾವಿಯಲ್ಲಿ ಮುಳುಗಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

Public TV
1 Min Read

ಬೆಂಗಳೂರು: ಈಜು ಬಾರದಿದ್ದರೂ ಬಾವಿಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ಮೂಲದ ಪ್ರವೀಣ್(24) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ. ಆನೇಕಲ್ ಪಟ್ಟಣದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪ್ರವೀಣ್ ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗಿದ್ದನು.

ಪಾರ್ಟಿ ಮುಗಿಸಿಕೊಂಡು ತಾಲೂಕಿನ ಜಿಗಣಿ ಹೋಬಳಿಯ ಸಿತನಾಯಕನಹಳ್ಳಿಯಲ್ಲಿನ ತೆರೆದ ಬಾವಿಯಲ್ಲಿ ಐವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದನು. ಈ ವೇಳೆ ಈಜು ಬಾರದ ಪ್ರವೀಣ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಳಿಕ ಸ್ನೇಹಿತರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ನಂತರ ಗ್ರಾಮಸ್ಥರ ಸಹಾಯದೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಮೃತ ಶವವನ್ನು ಹೊರತೆಗೆದಿದ್ದಾರೆ.

ಈ ಘಟನೆ ಕುರಿತು ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *