ರಾಜ್ಯಮಟ್ಟದ ಬಸವ ಸಂಸ್ಕೃತಿ ಅಭಿಯಾನಕ್ಕೆ ಈಶ್ವರ್ ಖಂಡ್ರೆ ಚಾಲನೆ

By
1 Min Read

ಬೀದರ್: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ಚಾಲನೆ ನೀಡಿದರು.

ಬೀದರ್ (Bidar) ನಗರದ ಬಸವೇಶ್ವರ ವೃತದಲ್ಲಿ ಬಲೂನ್ ಹಾರಿಸುವ ಮೂಲಕ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ ವಿಶೇಷವಾಗಿ ನಿರ್ಮಿಸಲಾಗಿದ್ದ ಬಸವಣ್ಣನ ಮೂರ್ತಿಯ ರಥ, ಇಷ್ಟಲಿಂಗ ರಥ, ರುದ್ರಾಕ್ಷಿ ರಥ, ವಿಭೂತಿ ರಥಗಳಿಗೆ ಚಾಲನೆ ನೀಡುವ ಮೂಲಕ ಸಾಂಸ್ಕೃತಿಕ ನಡಿಗೆಗೆ ಚಾಲನೆ ನೀಡಿದರು.ಇದನ್ನೂ ಓದಿ: PUBLiC TV Impact | ಸರ್ಕಾರದ ದುಡ್ಡನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದ ಪಿಡಿಓ ಅಮಾನತು

ಬಸವ ಪರಂಪರೆಯ ಸಮವಸ್ತ್ರಗಳಲ್ಲಿ ನಗರದ ಬಸವೇಶ್ವರ ವೃತ್ತದಿಂದ ಗುಂಪಾವರೆಗೆ ಬೃಹತ್ ಬಸವ ಸಾಂಸ್ಕೃತಿಕ ನಡಿಗೆ ನಡೆಯಿತು. ಈ ವೇಳೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕೂಡಾ ಭಾಗಿಯಾಗಿದ್ದರು.

ಮಾಜಿ ಸಚಿವ ರಾಜಶೇಖರ ಪಾಟೀಲ್, ಸಿರಿಗೇರಿ ಶ್ರೀಗಳು, ನಿಜಗುಣಾನಂದ ಸ್ವಾಮೀಜಿ, ಬಸವಲಿಂಗ ಪಟ್ಟದೇವರು ಸೇರಿದಂತೆ ಪ್ರಮುಖ ಸ್ವಾಮೀಜಿಗಳು, ಸಾವಿರಾರು ಬಸವ ಅನುಯಾಯಿಗಳು ಬಸವ ಸಂಸ್ಕೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿ: ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

Share This Article