ಪೆಗ್ ಹಾಕದಿದ್ದರೆ ಅನರ್ಹರಿಗೆ ನಿದ್ದೆಯೇ ಬರಲ್ಲ – ಈಶ್ವರ್ ಖಂಡ್ರೆ

Public TV
1 Min Read

ಬೀದರ್: ರಾತ್ರಿ ಒಂದು ಪೆಗ್ ಹಾಕದಿದ್ದರೆ ನಿದ್ದೆನೇ ಬರಲ್ಲ ಎಂದು ಅನರ್ಹ ಶಾಸಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಲೇವಡಿ ಮಾಡಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಿಜೆಪಿ ನಾಯಕರು ಅನರ್ಹರಿಗೆ ಕೈಕೊಟ್ಟು, ಮೋಸ ಮಾಡಿದ್ದರಿಂದ ಅನರ್ಹ ಶಾಸಕರಿಗೆ ಟೆನ್ಷನ್ ಆಗಿ ರಾತ್ರಿ ನಿದ್ದೆ ಬರುತ್ತಿಲ್ಲ. ನಮ್ಮ ಭವಿಷ್ಯ ಹಾಳಾಗಿದೆ ಎಂದು ಗೊತ್ತಾಗಿದ್ದು, ಶಾಸಕರು ಪಶ್ಚಾತ್ತಾಪ ಪಡುತ್ತಾ ಪ್ರತಿದಿನ ರಾತ್ರಿ ಒಂದು ಪೆಗ್ ಹಾಕಿ ಮಲಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಟಾಚಾರಕ್ಕೆ ಬೆಂಗಳೂರಿನಲ್ಲಿ ಅಧಿವೇಶನ ಕರೆದಿದ್ದು, ಬೆಳಗಾವಿಯಲ್ಲಿ ಈ ಅಧಿವೇಶನ ಕರೆಯಬೇಕಿತ್ತು. ಆದರೆ ಸಂತ್ರಸ್ತರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಸಂತ್ರಸ್ತರ ಕುರಿತು ಭಯವಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಚುನಾವಣೆ ದಿನಾಂಕ ಘೋಷಣೆ ಮಾಡುವುದು, ಮುಂದೂಡಿಕೆ ಮಾಡುವುದನ್ನು ಮಾಡುತ್ತಿದೆ. ಉಪ ಚುನಾವಣೆಯಲ್ಲಿ 15ಕ್ಕೆ 15 ಸೀಟನ್ನೂ ನಾವು ಗೆಲ್ಲುತ್ತೇವೆ. ಬಳಿಕ ಈ ಬಿಜೆಪಿ ಸರ್ಕಾರ ಇರುವುದಿಲ್ಲ ಎಂದು ಈಶ್ವರ್ ಖಂಡ್ರೆ ಭವಿಷ್ಯ ನುಡಿದರು.

Share This Article
Leave a Comment

Leave a Reply

Your email address will not be published. Required fields are marked *