50ರಲ್ಲಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುವೆ: ಏಕನಾಥ್ ಶಿಂಧೆ

By
2 Min Read

ಮುಂಬೈ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ 50 ಶಾಸಕರಲ್ಲಿ ಒಬ್ಬರು ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಶುಕ್ರವಾರ ಬೆಂಬಲಿತ ರೆಬೆಲ್ ಶಾಸಕರು ಶಿಂಧೆ ಅವರನ್ನು ಅಭಿನಂದಿಸಿದರು. ಈ ವೇಳೆ ಮಾತನಾಡಿದ ನೂತನ ಮುಖ್ಯಮಂತ್ರಿ, ಈ ಎಲ್ಲ ಶಾಸಕರ ಆಗು-ಹೋಗುಗಳ ಬಗ್ಗೆ ಗಮನ ಹರಿಸುವುದು ತಮ್ಮ ಕರ್ತವ್ಯ, ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಸಮಯ ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲ 50 ಶಾಸಕರು ಈಗ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ಜನರು ಹೇಳುತ್ತಾರೆ. ಆದರೆ ಒಬ್ಬ ಶಾಸಕ ಚುನಾವಣೆಯಲ್ಲಿ ಸೋತರೂ, ನಾನು ಶಾಶ್ವತವಾಗಿ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.

ಆರಂಭದಲ್ಲಿ ಕೆಲವೇ ಶಾಸಕರು ನಮ್ಮೊಂದಿಗಿದ್ದರು, ನಂತರ 50 ಮಂದಿ ಬಂದರು. ನಮ್ಮ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದರೂ ಯಾರೊಬ್ಬರೂ `ಡರ್ಟಿ ಗೇಮ್’ಗೆ ಬೆಂಬಲ ಕೊಡಲಿಲ್ಲ. ಆದರೆ ಜನ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿರ್ಧಾರವನ್ನು ಸ್ವಾಗತಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ತಲೆ ಕೆಡಿಸಿ, ಡಿವೋರ್ಸ್ ಕೊಡಿಸಿ ಮೋಸ ಮಾಡಿದ್ದಾನೆ- ಚಿಕ್ಕಬಳ್ಳಾಪುರದಲ್ಲಿ `ಪವಿತ್ರಾ ಮ್ಯಾರೇಜ್ ಸ್ಟೋರಿ’

ಸೂರತ್ ಮತ್ತು ಗುವಾಹಟಿಯಲ್ಲಿ ಇಷ್ಟು ದಿನ ನಿದ್ದೆ ಬರಲಿಲ್ಲ. ನಾನು 1 ಗಂಟೆಗೆ ಮಲಗುತ್ತಿದ್ದೆ ಮತ್ತು ಬೆಳಗ್ಗೆ 3 ಗಂಟೆಗೆ ಎದ್ದೇಳುತ್ತಿದ್ದೆ. ಇದು ನನ್ನ ಜೀವನದಲ್ಲಿ ಒಂದು ಅತಿ ನಿರ್ಣಾಯಕ ಕ್ಷಣವಾಗಿತ್ತು. ನಾನು ನನ್ನ ಭವಿಷ್ಯದ ಬಗ್ಗೆ ಚಿಂತಿಸಲಿಲ್ಲ ಆದರೆ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ನನ್ನೊಂದಿಗೆ ಬಂದಿದ್ದ 50 ಶಾಸಕರ ಭವಿಷ್ಯದ ಬಗ್ಗೆ ನನಗೆ ಕಾಳಜಿ ಇತ್ತು. ಅವರು ನನ್ನ ನಾಯಕತ್ವದಲ್ಲಿ ವಿಶ್ವಾಸ ತೋರಿಸಿದರು ಎಂದು ಶಿಂಧೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇನಾ ಶಾಸಕರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ. ಎನ್‌ಸಿಪಿ ಶಾಸಕರಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ನಾನು ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಯಾರೊಬ್ಬರಿಗೂ ಸಮಸ್ಯೆ ಆಗೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *