ಇದುವರೆಗೆ 1.5 ಕೋಟಿ ಜನ ರಾಮಲಲ್ಲಾನ ದರ್ಶನ ಪಡೆದಿದ್ದಾರೆ: ಚಂಪತ್‌ ರಾಯ್‌

Public TV
2 Min Read

ಅಯೋಧ್ಯೆ: ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ರಾಮಲಲ್ಲಾನ ‘ಪ್ರಾಣ ಪ್ರತಿಷ್ಠೆ’ ನಡೆದ ದೇವಾಲಯದ ನೆಲ ಮಹಡಿ ಮಾತ್ರ ಪೂರ್ಣಗೊಂಡಿದೆ. ಮೊದಲ ಅಂತಸ್ತಿನ ಕೆಲಸ ಇನ್ನೂ ನಡೆಯುತ್ತಿದೆ. ದೇವಾಲಯದ ಸುತ್ತಲೂ 14 ಅಡಿ ಅಗಲದ ಭದ್ರತಾ ಗೋಡೆ ನಿರ್ಮಿಸಲಾಗುವುದು. ಈ ಗೋಡೆಯನ್ನು ದೇವಾಲಯದ ‘ಪರ್ಕೋಟ’ ಎಂದು ಕರೆಯಲಾಗುತ್ತದೆ. ‘ಪರ್ಕೋಟ’ ಬಹುಪಯೋಗಿಯಾಗಿದ್ದು, ಅಲ್ಲಿ ಇನ್ನೂ 6 ದೇವಾಲಯಗಳನ್ನು ನಿರ್ಮಿಸಲಾಗುವುದು. ಅದು ಭಗವಾನ್ ಶಂಕರ, ಭಗವಾನ್ ಸೂರ್ಯ, ‘ಗರ್ಭಗೃಹ’ ಮತ್ತು ಎರಡು ತೋಳುಗಳಲ್ಲಿ, ಭಗವಾನ್ ಹನುಮಾನ್ ಮತ್ತು ಮಾ ಅನ್ನಪೂರ್ಣ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

Share This Article