ಆರಂಭದಲ್ಲಿ ಇವಿಎಂ ಚೆನ್ನಾಗಿತ್ತು, ನಂತ್ರ ಹ್ಯಾಕ್ ಆಗಿದೆ ಅಂತಿದ್ದಾರೆ: ಸಿಟಿ ರವಿ

Public TV
0 Min Read

ಬೆಂಗಳೂರು: ಬೆಳಗ್ಗೆ 8.45 ರಿಂದ 8.45ರವರೆಗೆ ಕಾಂಗ್ರೆಸ್ಸಿನವರಿಗೆ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಆದರೆ ಈಗ ಅವರು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಬಿಜಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.

ಗುಜರಾತ್ ಜನ ಸ್ಪಷ್ಟವಾಗಿ ಅಭಿವೃದ್ಧಿಯನ್ನು ನೋಡಿ ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಮೀಸಲಾತಿ ಹೋರಾಟ ಮತ್ತು ರಾಹುಲ್ ಗಾಂಧಿಯ ದೇವಾಲಯ ಭೇಟಿಯನ್ನ ಜನ ತಿರಸ್ಕರಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗುಜರಾತಿನಲ್ಲಿ ನಿಜವಾಗಿ ಬಿಜೆಪಿ ಜಯಗಳಿಸಿದರೂ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಹೊಗಳುತ್ತಿರುವುದು ಯಾಕೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *