ಕಾಂಗ್ರೆಸ್​ನ್ನು ಹೊಸ ಧರ್ಮ ಸಂಕಟದಲ್ಲಿ ಸಿಲುಕಿಸ್ತು ಎಚ್‍ಡಿಡಿ ಮಾತು

By
1 Min Read

ಬೆಂಗಳೂರು: ಲೋಕಸಭೆ ಸೀಟು ಹಂಚಿಕೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಜೆಡಿಎಸ್ ಪಕ್ಷಕ್ಕೆ 12 ಸ್ಥಾನ ಸಿಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಯಾವುದೇ ಸಮಸ್ಯೆ ಇಲ್ಲದಂತೆ ಈ ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತೇವೆ. ಜನವರಿ 8 ರಂದು ಲೋಕಸಭೆ ಅಧಿವೇಶನ ಮುಗಿಯಲಿದೆ. ಜನವರಿ 15ರ ಒಳಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.

ಇದುವರೆಗೆ 8 ರಿಂದ 10 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗುತ್ತಿತ್ತು. ಆದರೆ ಈಗ ಜೆಡಿಎಸ್ ವರಿಷ್ಠರೆ 12 ಸ್ಥಾನ ಬೇಕು ಎಂಬ ನೇರ ಬೇಡಿಕೆ ಇಟ್ಟಿದ್ದು. ಇದರೊಂದಿಗೆ ದೋಸ್ತಿ ಪಕ್ಷ ಕಾಂಗ್ರೆಸ್‍ಗೆ ಹೊಸ ಧರ್ಮ ಸಂಕಟ ಎದುರಾಗಿದೆ.

ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೈತಪ್ಪಿದ್ದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರೋ ಶಾಸಕ ಡಾ. ಸುಧಾಕರ್ ಗೆ ಮಾಜಿ ಪ್ರಧಾನಿ ದೇವೇಗೌಡರು ತಿಳಿ ಹೇಳಿದ್ದು, ಯಾರೂ ಕೂಡ ಇಲ್ಲಸಲ್ಲದ ಹೇಳಿಕೆ ನೀಡುವುದು ತರವಲ್ಲ ಎಂದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *