ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ

Public TV
1 Min Read

ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

ಇಂದು ಬೆಳಗ್ಗೆ 10:30ಕ್ಕೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.

ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಅವರು ವಾದಿಸಿದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು.

ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ – ತನಿಖೆ ಚುರುಕುಗೊಳಿಸಿದ ಪೊಲೀಸರು

ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *