ಹೈದರಾಬಾದ್: ಬಿ.ಟೆಕ್ ಪರೀಕ್ಷೆಯ 9 ವಿಷಯಗಳಲ್ಲಿ ಫೇಲ್ ಆಗಿದ್ದರೂ ಪೋಷಕರು ಬೈಯದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.
ಗುರುಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಬಿ.ಟೆಕ್ ವಿದ್ಯಾರ್ಥಿನಿ. ಗುರುಲಕ್ಷ್ಮಿ ಸ್ಥಳೀಯ ರಾಜಕೀಯ ಮುಖಂಡರದ ವೆಂಕಟರೆಡ್ಡಿ ಅವರ ಪುತ್ರಿಯಾಗಿದ್ದಾಳೆ.
ಗುರು ಲಕ್ಷ್ಮಿ ಪ್ರಕಾಶಂ ಜಿಲ್ಲೆಯ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಟೆಕ್ ಪದವಿ ಓದುತ್ತಿದ್ದಳು. ಆದ್ರೆ ಪರೀಕ್ಷೆಯಲ್ಲಿ ಈಕೆ 9 ವಿಷಯಗಳಲ್ಲಿ ಫೇಲ್ ಆಗಿದ್ದ ಕಾರಣ ಹೆಚ್ಚು ಮಾನಸಿಕ ಒತ್ತಡಕ್ಕೆ ಗುರಿಯಾದ್ದಳು. ಪುತ್ರಿ ಪರೀಕ್ಷೆಯಲ್ಲಿ ಫೇಲ್ ಆದ ವಿಷಯ ತಿಳಿದ ಪೋಷಕರು ಆಕೆಯನ್ನು ಬೈದಿರಲಿಲ್ಲ ಎನ್ನಲಾಗಿದೆ. ಆದರೆ ಇದರಿಂದ ಮತ್ತಷ್ಟು ಮಾನಸಿಕವಾಗಿ ನೊಂದ ಗುರುಲಕ್ಷ್ಮಿ ಮನೆಯ ಕೊಠಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಳು.
ಕೊಠಡಿಯಲ್ಲಿ ಒದ್ದಾಡುತ್ತಿದ್ದನ್ನು ಕಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುಲಕ್ಷ್ಮಿ ಮೃತಪಟ್ಟಿದ್ದಾಳೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೂ ಮುನ್ನ ಗುರುಲಕ್ಷ್ಮಿ ಬರೆದಿರುವ ಪತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಫೇಲ್ ಆಗಿದ್ದರೂ ಪೋಷಕರು ಬೈಯದ್ದಕ್ಕೆ ನಾನು ಆತ್ಮಹತ್ಯೆ ಮಾಡಿಕೊಂಡಿದ್ದು ಎಂದು ಗುರು ಲಕ್ಷ್ಮಿ ಪತ್ರದಲ್ಲಿ ಬರೆದಿದ್ದಾಳೆ. ಈ ಪತ್ರದ ಬಗ್ಗೆ ಅನುಮಾನ ಮೂಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.